ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಕೋವಿಡ್ನಿಂದ ಮೃತಪಟ್ಟ ಪತ್ರಕರ್ತರಿಗೆ ₹ 5 ಲಕ್ಷ ಪರಿಹಾರ ಕೊಡುವುದಾಗಿ ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರಿಹಾರ ನಿಧಿಯಿಂದ ಕಳೆದ ವಾರ ತಾಂದಳೆ ಅವರ ಪತ್ನಿ ವಿದ್ಯಾವತಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗಿದೆ ಎಂದು ತಾಂದಳೆ ಪರಿವಾರದ ಹೇಳಿಕೆ ತಿಳಿಸಿದೆ.