<p><strong>ಹುಮನಾಬಾದ್</strong>: ತಾಲ್ಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿದುಬಿದ್ದಿರುವ ಕುಟುಂಬದ ಸದಸ್ಯರಿಗೆ ಶಾಸಕ ರಾಜಶೇಖರ ಪಾಟೀಲ ಅವರು ₹50 ಸಾವಿರ ನೆರವು ನೀಡಿದ್ದಾರೆ.</p>.<p>ಪ್ರಕಾಶ್ ಭೋಮಶೆಟ್ಟಿ (38) ನಿಧನ ಹೊಂದಿದ ಮರುದಿನವೇ ಮಳೆಯಿಂದ ಅವರ ಮನೆ ಕುಸಿದು ಬಿದ್ದಿದೆ. ಈ ವಿಷಯ ತಿಳಿದ ಶಾಸಕರು ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ಅವರ ಪತ್ನಿಗೆ ಧೈರ್ಯ ಹೇಳಿದರು.</p>.<p>ಮೃತ ವ್ಯಕ್ತಿಯ ಇಬ್ಬರು ಪುತ್ರಿಯರ ಮುಂದಿನ ಶಿಕ್ಷಣವನ್ನು ತಾವೇ ನೋಡಿಕೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು.</p>.<p>ಸರ್ಕಾರದ ವತಿಯಿಂದ ಯಾವುದಾದರೂ ಒಂದು ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಣರಾವ ಬುಳ್ಳಾ, ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಅಫ್ಸರ್ ಮಿಯ್ಯಾ, ಶಿವರಾಜ ಗಂಗಶೆಟ್ಟಿ, ಪ್ರಕಾಶ ಕಾಡಗೊಂಡ, ಉಮೇಶ್ ಜಮಗಿ, ಬಸವರಾಜ ಶೇರಿಕಾರ, ಸಂಗಮೇಶ ಪಾಟೀಲ, ಘಾಳೆಪ್ಪ ಹುಂಡೆಕರ್, ಶ್ರೀಕಾಂತ ಪಾಟೀಲ, ಉಮೇಶ ಪಾಟೀಲ, ವೀರಪ್ಪ ಭೂತಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್</strong>: ತಾಲ್ಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿದುಬಿದ್ದಿರುವ ಕುಟುಂಬದ ಸದಸ್ಯರಿಗೆ ಶಾಸಕ ರಾಜಶೇಖರ ಪಾಟೀಲ ಅವರು ₹50 ಸಾವಿರ ನೆರವು ನೀಡಿದ್ದಾರೆ.</p>.<p>ಪ್ರಕಾಶ್ ಭೋಮಶೆಟ್ಟಿ (38) ನಿಧನ ಹೊಂದಿದ ಮರುದಿನವೇ ಮಳೆಯಿಂದ ಅವರ ಮನೆ ಕುಸಿದು ಬಿದ್ದಿದೆ. ಈ ವಿಷಯ ತಿಳಿದ ಶಾಸಕರು ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ಅವರ ಪತ್ನಿಗೆ ಧೈರ್ಯ ಹೇಳಿದರು.</p>.<p>ಮೃತ ವ್ಯಕ್ತಿಯ ಇಬ್ಬರು ಪುತ್ರಿಯರ ಮುಂದಿನ ಶಿಕ್ಷಣವನ್ನು ತಾವೇ ನೋಡಿಕೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು.</p>.<p>ಸರ್ಕಾರದ ವತಿಯಿಂದ ಯಾವುದಾದರೂ ಒಂದು ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಣರಾವ ಬುಳ್ಳಾ, ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಅಫ್ಸರ್ ಮಿಯ್ಯಾ, ಶಿವರಾಜ ಗಂಗಶೆಟ್ಟಿ, ಪ್ರಕಾಶ ಕಾಡಗೊಂಡ, ಉಮೇಶ್ ಜಮಗಿ, ಬಸವರಾಜ ಶೇರಿಕಾರ, ಸಂಗಮೇಶ ಪಾಟೀಲ, ಘಾಳೆಪ್ಪ ಹುಂಡೆಕರ್, ಶ್ರೀಕಾಂತ ಪಾಟೀಲ, ಉಮೇಶ ಪಾಟೀಲ, ವೀರಪ್ಪ ಭೂತಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>