<p><strong>ಬೀದರ್</strong>: ಇಲ್ಲಿನ ನೂತನ ನಗರ ಠಾಣೆ ಪೊಲೀಸರು 52 ಮೊಬೈಲ್ಗಳನ್ನು ಪತ್ತೆ ಹಚ್ಚಿ, ವಾರಸುದಾರರಿಗೆ ನಗರದಲ್ಲಿ ಸೋಮವಾರ ಹಿಂತಿರುಗಿಸಿದರು.</p>.<p>₹12 ಲಕ್ಷ ಮೊತ್ತದ 52 ಮೊಬೈಲ್ಗಳನ್ನು ಸಾರ್ವಜನಿಕರು ಕಳೆದುಕೊಂಡಿದ್ದರು. ಈ ಕುರಿತು ಈ–ಲಾಸ್ಟ್ ಮತ್ತು ಸಿಇಐಆರ್ ಪೋರ್ಟಲ್ನಲ್ಲಿ ದೂರು ದಾಖಲಿಸಿದ್ದರು. ಮೊಬೈಲ್ಗಳ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರು ತಂಡ ರಚಿಸಿದ್ದರು. ತಂಡವು ಸೈಬರ್ ಹಾಗೂ ಅಪರಾಧ ವಿಭಾಗದ ನೆರವಿನೊಂದಿಗೆ ಮೊಬೈಲ್ಗಳನ್ನು ಪತ್ತೆ ಹಚ್ಚಿದೆ.</p>.<p>ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಾರಸುದಾರರನ್ನು ಕರೆಸಿ, ಅವರಿಗೆ ಮೊಬೈಲ್ಗಳನ್ನು ಹಿಂತಿರುಗಿಸಿದರು.</p>.<p>‘ಸಾರ್ವಜನಿಕರು ಮೊಬೈಲ್ಗಳನ್ನು ಕಳೆದುಕೊಂಡರೆ ಅಥವಾ ಯಾರಾದರೂ ಕಳವು ಮಾಡಿದರೆ ಈ–ಲಾಸ್ಟ್ ಅಥವಾ ಸಿಇಐಆರ್ ಪೋರ್ಟಲ್ನಲ್ಲಿ ದೂರು ದಾಖಲಿಸಿದರೆ ಪತ್ತೆ ಹಚ್ಚಿ ಹಿಂತಿರುಗಿಸಲಾಗುವುದು’ ಎಂದು ಎಸ್ಪಿ ಚನ್ನಬಸವಣ್ಣ ಎಸ್.ಎಲ್. ತಿಳಿಸಿದರು.</p>.<p>ಮೊಬೈಲ್ಗಳ ಪತ್ತೆಗೆ ರಚಿಸಲಾಗಿದ್ದ ತಂಡದಲ್ಲಿ ಡಿವೈಎಸ್ಪಿ ಶಿವನಗೌಡ ಪಾಟೀಲ, ನೂತನ ನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ ಎಲ್.ಟಿ., ಗಣಕಯಂತ್ರ ವಿಭಾಗದ ಸಿಬ್ಬಂದಿ ಸಚಿನ್, ಸಂತೋಷ, ಅಪರಾಧ ವಿಭಾಗದ ಸಿಬ್ಬಂದಿ ರಾಮಣ್ಣ, ಧನರಾಜ, ಮಲ್ಲಿಕಾರ್ಜುನ, ಭರತ ಹಾಗೂ ನಿಂಗಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಇಲ್ಲಿನ ನೂತನ ನಗರ ಠಾಣೆ ಪೊಲೀಸರು 52 ಮೊಬೈಲ್ಗಳನ್ನು ಪತ್ತೆ ಹಚ್ಚಿ, ವಾರಸುದಾರರಿಗೆ ನಗರದಲ್ಲಿ ಸೋಮವಾರ ಹಿಂತಿರುಗಿಸಿದರು.</p>.<p>₹12 ಲಕ್ಷ ಮೊತ್ತದ 52 ಮೊಬೈಲ್ಗಳನ್ನು ಸಾರ್ವಜನಿಕರು ಕಳೆದುಕೊಂಡಿದ್ದರು. ಈ ಕುರಿತು ಈ–ಲಾಸ್ಟ್ ಮತ್ತು ಸಿಇಐಆರ್ ಪೋರ್ಟಲ್ನಲ್ಲಿ ದೂರು ದಾಖಲಿಸಿದ್ದರು. ಮೊಬೈಲ್ಗಳ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರು ತಂಡ ರಚಿಸಿದ್ದರು. ತಂಡವು ಸೈಬರ್ ಹಾಗೂ ಅಪರಾಧ ವಿಭಾಗದ ನೆರವಿನೊಂದಿಗೆ ಮೊಬೈಲ್ಗಳನ್ನು ಪತ್ತೆ ಹಚ್ಚಿದೆ.</p>.<p>ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಾರಸುದಾರರನ್ನು ಕರೆಸಿ, ಅವರಿಗೆ ಮೊಬೈಲ್ಗಳನ್ನು ಹಿಂತಿರುಗಿಸಿದರು.</p>.<p>‘ಸಾರ್ವಜನಿಕರು ಮೊಬೈಲ್ಗಳನ್ನು ಕಳೆದುಕೊಂಡರೆ ಅಥವಾ ಯಾರಾದರೂ ಕಳವು ಮಾಡಿದರೆ ಈ–ಲಾಸ್ಟ್ ಅಥವಾ ಸಿಇಐಆರ್ ಪೋರ್ಟಲ್ನಲ್ಲಿ ದೂರು ದಾಖಲಿಸಿದರೆ ಪತ್ತೆ ಹಚ್ಚಿ ಹಿಂತಿರುಗಿಸಲಾಗುವುದು’ ಎಂದು ಎಸ್ಪಿ ಚನ್ನಬಸವಣ್ಣ ಎಸ್.ಎಲ್. ತಿಳಿಸಿದರು.</p>.<p>ಮೊಬೈಲ್ಗಳ ಪತ್ತೆಗೆ ರಚಿಸಲಾಗಿದ್ದ ತಂಡದಲ್ಲಿ ಡಿವೈಎಸ್ಪಿ ಶಿವನಗೌಡ ಪಾಟೀಲ, ನೂತನ ನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ ಎಲ್.ಟಿ., ಗಣಕಯಂತ್ರ ವಿಭಾಗದ ಸಿಬ್ಬಂದಿ ಸಚಿನ್, ಸಂತೋಷ, ಅಪರಾಧ ವಿಭಾಗದ ಸಿಬ್ಬಂದಿ ರಾಮಣ್ಣ, ಧನರಾಜ, ಮಲ್ಲಿಕಾರ್ಜುನ, ಭರತ ಹಾಗೂ ನಿಂಗಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>