ದೈಹಿಕ ಶಿಕ್ಷಣ ನಿರ್ದೇಶಕ ಜಯಪ್ರಕಾಶ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಎರಡೂ ಸ್ಪರ್ಧೆಗಳಲ್ಲಿ ಸತತ ಮೂರನೇ ವರ್ಷ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆ ಸಂತಸ ಉಂಟು ಮಾಡಿದೆ ಎಂದು ಗುರುನಾನಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸರ್ದಾರ್ ಬಲ್ಬೀರಸಿಂಗ್, ಉಪಾಧ್ಯಕ್ಷೆ ರೇಷ್ಮಾ ಕೌರ್ ತಿಳಿಸಿದ್ದಾರೆ.