ಬಸವಕಲ್ಯಾಣ: ಇಲ್ಲಿಗೆ ಸಮೀಪದ ಸಸ್ತಾಪುರ ಬಂಗ್ಲಾ ಹತ್ತಿರದಲ್ಲಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ ₹ 5.4 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿ ಕೊಂಡು ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಒಟ್ಟು 2 ಕೆಜಿಯ 36 ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಮಹಾರಾಷ್ಟ್ರಕ್ಕೆ ಮಾರಾಟಕ್ಕೆ ತೆಗೆದುಕೊಂಡು ಹೋಗಲಾ ಗುತ್ತಿತ್ತು ಎನ್ನಲಾಗಿದ್ದು, ಈ ಸಂಬಂಧ ಮಲ್ಲಿಕಾರ್ಜುನ ನಾಗಪ್ಪ ಸಗರ, ಸಿದ್ರಾಮಪ್ಪ ಬಸವಣ್ಣಪ್ಪ ಗುದಗೆ, ಛಾಯಾ ಬಾಳು ಭೋಸ್ಲೆ ಅವರನ್ನು ಬಂಧಿಸಲಾಗಿದೆ.
ವಿಯವಾಡಾದಿಂದ ಇವರಿಗೆ ಗಾಂಜಾ ಸರಬರಾಜು ಮಾಡಲಾಗಿತ್ತು. ಎಸ್ಐ ಗುರು ಪಾಟೀಲ ನೇತೃತ್ವದಲ್ಲಿ ಗಾಂಜಾ ವಶಕ್ಕೆ ತೆಗೆದುಕೊಳ್ಳಲಾಗಿದೆ. ನಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್, ಡಿವೈಎಸ್ಪಿ ಸೋಮಲಿಂಗ ಕುಂಬಾರ ಮತ್ತು ಸಿಪಿಐ ಜೆ.ಎಸ್.ನ್ಯಾಮೆಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.