ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರ ಪ್ರಶ್ನೆಗೆ ಕಂದಾಯ ಸಚಿವ ಆರ್. ಅಶೋಕ ಅವರು ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ. 2019-20 ರಲ್ಲಿ ಒಟ್ಟು 42 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದವು. ಇದರಲ್ಲಿ 10 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. 32 ಪ್ರಕರಣಗಳಲ್ಲಿ ಪರಿಹಾರ ನೀಡಲಾಗಿದೆ. ಬೀದರ್ ತಾಲ್ಲೂಕಿನಲ್ಲಿ 11, ಭಾಲ್ಕಿ ತಾಲ್ಲೂಕಿನಲ್ಲಿ 9, ಬಸವಕಲ್ಯಾಣ ತಾಲ್ಲೂಕಿನಲ್ಲಿ 3, ಹುಮನಾಬಾದ್ ತಾಲ್ಲೂಕಿನಲ್ಲಿ 10 ಮತ್ತು ಔರಾದ್ ತಾಲ್ಲೂಕಿನಲ್ಲಿ 9 ಪ್ರಕರಣಗಳು ವರದಿಯಾಗಿದ್ದವು.