<p><strong>ಭಾಲ್ಕಿ: </strong>‘ಪ್ರತಿಯೊಬ್ಬರೂ ಲಸಿಕೆ ಪಡೆದು ರಾಷ್ಟ್ರವನ್ನು ಕೊರೊನಾ ಮುಕ್ತವಾಗಿಸಬೇಕಾಗಿದೆ’ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೂರ್ಯಕಾಂತ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಕುರುಬಖೇಳಗಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಆಯೋಜಿಸಿದ್ದ ವಿಶೇಷ ಲಸಿಕಾಕರಣಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಮಾತನಾಡಿ, ‘ಜಿಲ್ಲಾಧಿಕಾರಿ ಅವರು ತಾಲ್ಲೂಕಿಗೆ 5 ಸಾವಿರ ಲಸಿಕೆ ಹಾಕಿಸುವ ಗುರಿ ನಿಗದಿಪಡಿಸಿದ್ದಾರೆ. ನಾವು ಪ್ರತಿ ಗ್ರಾ.ಪಂ.ಗೆ ಕನಿಷ್ಠ 100 ಲಸಿಕೆ ಹಾಕಿಸುವ ಗುರಿ ನಿಗದಿಪಡಿಸಿದ್ದೇವೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಲಸಿಕೆ ಹಾಕಿಸಿದ ಒಟ್ಟು 3 ಗ್ರಾ.ಪಂ.ಗಳಿಗೆ ತಲಾ ₹4 ಸಾವಿರ, ₹3 ಸಾವಿರ, ₹2 ಸಾವಿರ ಬಹುಮಾನ ಮತ್ತು ಅಭಿನಂದನಾ ಪ್ರಮಾಣ ಪತ್ರ ನೀಡಲಾಗುವುದು’ ಎಂದು ತಿಳಿಸಿದರು.</p>.<p>ತಾಲ್ಲೂಕಿನಲ್ಲಿ ಒಂದೇ ದಿನ ಒಟ್ಟು 7,903 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.</p>.<p>ಡಾವರಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಪ್ರವೀಣ ಕುರುಬಖೇಳಗಿ, ಪಿಡಿಒ ಬಸವರಾಜ, ಮುಖ್ಯಶಿಕ್ಷಕ ಜಯರಾಜ ದಾಬಶೆಟ್ಟಿ, ಆರೋಗ್ಯ ಇಲಾಖೆಯ ಸುಮಿತಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ: </strong>‘ಪ್ರತಿಯೊಬ್ಬರೂ ಲಸಿಕೆ ಪಡೆದು ರಾಷ್ಟ್ರವನ್ನು ಕೊರೊನಾ ಮುಕ್ತವಾಗಿಸಬೇಕಾಗಿದೆ’ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೂರ್ಯಕಾಂತ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಕುರುಬಖೇಳಗಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಆಯೋಜಿಸಿದ್ದ ವಿಶೇಷ ಲಸಿಕಾಕರಣಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಮಾತನಾಡಿ, ‘ಜಿಲ್ಲಾಧಿಕಾರಿ ಅವರು ತಾಲ್ಲೂಕಿಗೆ 5 ಸಾವಿರ ಲಸಿಕೆ ಹಾಕಿಸುವ ಗುರಿ ನಿಗದಿಪಡಿಸಿದ್ದಾರೆ. ನಾವು ಪ್ರತಿ ಗ್ರಾ.ಪಂ.ಗೆ ಕನಿಷ್ಠ 100 ಲಸಿಕೆ ಹಾಕಿಸುವ ಗುರಿ ನಿಗದಿಪಡಿಸಿದ್ದೇವೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಲಸಿಕೆ ಹಾಕಿಸಿದ ಒಟ್ಟು 3 ಗ್ರಾ.ಪಂ.ಗಳಿಗೆ ತಲಾ ₹4 ಸಾವಿರ, ₹3 ಸಾವಿರ, ₹2 ಸಾವಿರ ಬಹುಮಾನ ಮತ್ತು ಅಭಿನಂದನಾ ಪ್ರಮಾಣ ಪತ್ರ ನೀಡಲಾಗುವುದು’ ಎಂದು ತಿಳಿಸಿದರು.</p>.<p>ತಾಲ್ಲೂಕಿನಲ್ಲಿ ಒಂದೇ ದಿನ ಒಟ್ಟು 7,903 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.</p>.<p>ಡಾವರಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಪ್ರವೀಣ ಕುರುಬಖೇಳಗಿ, ಪಿಡಿಒ ಬಸವರಾಜ, ಮುಖ್ಯಶಿಕ್ಷಕ ಜಯರಾಜ ದಾಬಶೆಟ್ಟಿ, ಆರೋಗ್ಯ ಇಲಾಖೆಯ ಸುಮಿತಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>