‘ಜಾನಪದ ಸಮ್ಮೇಳನದಲ್ಲಿ ನಡೆದ ಕವಿಗೋಷ್ಠಿ, ಕಲೆಗಳ ಪ್ರದರ್ಶನ ಜಿಲ್ಲೆಗೆ ಶೋಭೆ ತಂದುಕೊಟ್ಟಿವೆ. ರಾಣಿ ಸತ್ಯಮೂರ್ತಿ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮಾಡಿರುವುದು ಸ್ತುತ್ಯಾರ್ಹವಾಗಿದೆ’ ಎಂದು ಹೇಳಿದರು.
ಸಾಹಿತಿ ಚಂದ್ರಪ್ಪ ಹೆಬ್ಬಾಳಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಸವ ತತ್ವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೈಜಿನಾಥ ಕಮಠಾಣೆ, ನಿವೃತ್ತ ಪ್ರಾಚಾರ್ಯ ಪ್ರೊ.ಎಸ್.ಬಿ. ಬಿರಾದಾರ, ಹಿರಿಯ ಸಾಹಿತಿ ಮಾನಶೆಟ್ಟಿ ಬೆಳಕೇರಿ, ಕರ್ನಾಟಕ ಸಾಹಿತ್ಯ ಸಂಘ ಟ್ರಸ್ಟ್ ಅಧ್ಯಕ್ಷ ಶಂಕ್ರೆಪ್ಪ ಹೊನ್ನಾ, ಚಿಂತಕಿ ಲುಂಬಿಣಿ ಗೌತಮ ಇದ್ದರು.