<p><strong>ಜನವಾಡ</strong>: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜನಪದ ಕಲಾವಿದರ ಬಳಗದ ಆಶ್ರಯದಲ್ಲಿ ಕರ್ನಾಟಕ-ತೆಲಂಗಾಣ ಗಡಿ ಸಮೀಪ ಬೀದರ್ ತಾಲ್ಲೂಕಿನ ಮಲ್ಕಾಪುರ ಗ್ರಾಮದಲ್ಲಿ ನಮ್ಮ ಹಳ್ಳಿಯ ಜಾನಪದ ಸಂಭ್ರಮ ಕಾರ್ಯಕ್ರಮ ನಡೆಯಿತು.</p>.<p>ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ‘ಇಂದು ಹಳ್ಳಿಗಳಲ್ಲೇ ನೆಲಮೂಲದ ಸಂಸ್ಕೃತಿ ಹಾಗೂ ಕಲೆಗಳು ಉಳಿದುಕೊಂಡಿವೆ. ಇಂತಹ ಕಾರ್ಯಕ್ರಮಗಳ ಮೂಲಕ ಕಲೆ ಹಾಗೂ ಕಲಾವಿದರನ್ನು ಪೋಷಿಸಬೇಕಾಗಿದೆ’ ಎಂದರು.</p>.<p>ಬಿಜೆಪಿ ಮುಖಂಡ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಇಂತಹ ಕಾರ್ಯಕ್ರಮಗಳ ದೇಸಿಯ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.</p>.<p>ಜನಪದ ಕಲಾವಿದರ ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಬಾಬುರಾವ ಮಲ್ಕಾಪೂರೆ, ನೃತ್ಯ ಕಲಾವಿದ ಬಳ್ಳಾರಿಯ ಬಸವರಾಜ ಮಾತನಾಡಿದರು. ಪಿಡಿಒ ವೀರಶೆಟ್ಟಿ ಪಾಟೀಲ ಮತ್ತು ಮುಖಂಡ ವಿಕ್ರಮ ಮುದಾಳೆ ಇದ್ದರು.</p>.<p>ನರಸಿಂಹಂಲು ಡಪ್ಪೂರ, ಮಹೇಶ ಕುಂಬಾರ, ಶಿವಾನಿ ಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ, ಮಲ್ಲಿಕಾರ್ಜುನ ನಾಗಮಾರಪಳ್ಳಿ, ಸಂಜುಕುಮಾರ ಉಜನಿ, ಡಿಲೈಮಾ ಆಣದೂರ, ದೇವದಾಸ ಚಿಮಕೋಡ, ರಮೇಶ ದೊಡ್ಡಿ, ಮಧುಕರ ಘೋಡ್ಕೆ , ಸುನೀಲ ಕಡ್ಡೆ, ಶಂಕರ ಚೊಂಡಿ, ಚಿನ್ನಮ್ಮಾ ಲಾಧಾ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಸುಧಾಕರ ಎಲ್ಲಾನೋರ್ ನಿರೂಪಿಸಿದರು. ಸುನೀಲ ಕಡ್ಡೆ ಸ್ವಾಗತಿಸಿದರು. ಯೇಸುದಾಸ ಅಲುಂಬುರೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ</strong>: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜನಪದ ಕಲಾವಿದರ ಬಳಗದ ಆಶ್ರಯದಲ್ಲಿ ಕರ್ನಾಟಕ-ತೆಲಂಗಾಣ ಗಡಿ ಸಮೀಪ ಬೀದರ್ ತಾಲ್ಲೂಕಿನ ಮಲ್ಕಾಪುರ ಗ್ರಾಮದಲ್ಲಿ ನಮ್ಮ ಹಳ್ಳಿಯ ಜಾನಪದ ಸಂಭ್ರಮ ಕಾರ್ಯಕ್ರಮ ನಡೆಯಿತು.</p>.<p>ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ‘ಇಂದು ಹಳ್ಳಿಗಳಲ್ಲೇ ನೆಲಮೂಲದ ಸಂಸ್ಕೃತಿ ಹಾಗೂ ಕಲೆಗಳು ಉಳಿದುಕೊಂಡಿವೆ. ಇಂತಹ ಕಾರ್ಯಕ್ರಮಗಳ ಮೂಲಕ ಕಲೆ ಹಾಗೂ ಕಲಾವಿದರನ್ನು ಪೋಷಿಸಬೇಕಾಗಿದೆ’ ಎಂದರು.</p>.<p>ಬಿಜೆಪಿ ಮುಖಂಡ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಇಂತಹ ಕಾರ್ಯಕ್ರಮಗಳ ದೇಸಿಯ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.</p>.<p>ಜನಪದ ಕಲಾವಿದರ ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಬಾಬುರಾವ ಮಲ್ಕಾಪೂರೆ, ನೃತ್ಯ ಕಲಾವಿದ ಬಳ್ಳಾರಿಯ ಬಸವರಾಜ ಮಾತನಾಡಿದರು. ಪಿಡಿಒ ವೀರಶೆಟ್ಟಿ ಪಾಟೀಲ ಮತ್ತು ಮುಖಂಡ ವಿಕ್ರಮ ಮುದಾಳೆ ಇದ್ದರು.</p>.<p>ನರಸಿಂಹಂಲು ಡಪ್ಪೂರ, ಮಹೇಶ ಕುಂಬಾರ, ಶಿವಾನಿ ಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ, ಮಲ್ಲಿಕಾರ್ಜುನ ನಾಗಮಾರಪಳ್ಳಿ, ಸಂಜುಕುಮಾರ ಉಜನಿ, ಡಿಲೈಮಾ ಆಣದೂರ, ದೇವದಾಸ ಚಿಮಕೋಡ, ರಮೇಶ ದೊಡ್ಡಿ, ಮಧುಕರ ಘೋಡ್ಕೆ , ಸುನೀಲ ಕಡ್ಡೆ, ಶಂಕರ ಚೊಂಡಿ, ಚಿನ್ನಮ್ಮಾ ಲಾಧಾ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಸುಧಾಕರ ಎಲ್ಲಾನೋರ್ ನಿರೂಪಿಸಿದರು. ಸುನೀಲ ಕಡ್ಡೆ ಸ್ವಾಗತಿಸಿದರು. ಯೇಸುದಾಸ ಅಲುಂಬುರೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>