<p><strong>ಪ್ರಜಾವಾಣಿ ವಾರ್ತೆ<br />ಬೀದರ್:</strong> ‘ಸಾಹಿತಿಗಳಿಂದ ಜನಪ್ರಿಯ ಸಾಹಿತ್ಯ ಮಾತ್ರ ರಚನೆಯಾಗುತ್ತಿದೆ. ಆದರೆ, ಜೀವಪರ ಹಾಗೂ ಜನಪರ ಸಾಹಿತ್ಯ ಹೊರ ಬರುತ್ತಿಲ್ಲ’ ಎಂದು ಕಲಬುರ್ಗಿಯ ಸಾಹಿತಿ ಕಾವ್ಯಶ್ರೀ ಮಹಾಗಾಂವಕರ್ ವಿಷಾದ ವ್ಯಕ್ತಪಡಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಬೀದರ್ ತಾಲ್ಲೂಕು ಘಟಕದ ವತಿಯಿಂದ ಇಲ್ಲಿಯ ಡಾ.ಚನ್ನಬಸವ ಪಟ್ಟದ್ದೇವರ ಜಿಲ್ಲಾ ರಂಗ ಮಂದಿರದಲ್ಲಿ ಗುರುವಾರ ನಡೆದ ನಡೆದ ತಾಲ್ಲೂಕು ಮಟ್ಟದ ಎರಡನೆಯ ಯುವ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಾಹಿತ್ಯ ಸಮ್ಮೇಳನಗಳು ಕಲೆ, ಸಾಹಿತ್ಯ, ಸಂಸ್ಕೃತಿಯ ಪ್ರತೀಕವಾಗಿದೆ. ಯಾವ ದೇಶದಲ್ಲಿ ಬಡತನ, ಹಸಿವು, ಹೋರಾಟ, ಸಂಘರ್ಷವಿದೆಯೋ? ಆ ದೇಶದಲ್ಲಿ ಗಟ್ಟಿ ಸಾಹಿತ್ಯ ಹುಟ್ಟುತ್ತದೆ ಎನ್ನುವುದು ಹಿರಿಯ ಆಂಗ್ಲ ಸಾಹಿತಿಗಳ ಅನಿಸಿಕೆಯಾಗಿದೆ. ಈಗಿನ ಯುವಪೀಳಿಗೆಗೆ ಬಡತನ, ಹಸಿವು, ಹೋರಾಟ ಮತ್ತು ಸಂಘರ್ಷದ ಗಂದ-ಗಾಳಿಯೂ ಗೊತ್ತಿಲ್ಲ. ಬಹುಶಃ ಈ ಕಾರಣಕ್ಕಾಗಿಯೇ ಯುವ ಪೀಳಿಗೆಯ ಜೀವನ ದಾರಿ ತಪ್ಪುತ್ತಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಯುವ ಸಮುದಾಯದವರು ಮೊಬೈಲ್, ವಾಟ್ಸ್ಆ್ಯಪ್, ಫೇಸ್ಬುಕ್, ಟ್ವಿಟ್ಟರ್, ಇಂಟರ್ನೆಟ್ ಗುಲಾಮರಾಗುತ್ತಿದ್ದಾರೆ.<br />ತನ್ನತನವನ್ನು ಕಳೆದುಕೊಂಡು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ದೇಶದ ಯುವ ಜನಾಂಗವನ್ನು ಸರಿದಾರಿಗೆ ತರವಂತಹ ಸಾಹಿತ್ಯ ರಚಿಸುವುದು ಇಂದಿನ ಅಗತ್ಯವಾಗಿದೆ’ ಎಂದರು.</p>.<p>‘ಬುದ್ಧ-ಬಸವ-ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದರೆ, ಜೀವನ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಜಿಲ್ಲೆಯ ಸಂಘ-ಸಂಸ್ಥೆಗಳ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಮಾತನಾಡಿ, ‘ಯುವ ಸಾಹಿತ್ಯ ಸಮ್ಮೇಳದ ಜತೆಗೆ ಮಕ್ಕಳ ಸಾಹಿತ್ಯ ಸಮ್ಮೇಳನವೂ ನಡೆಯಬೇಕು. ಕನ್ನಡ ಭಾಷಾ ಬೆಳವಣಿಗೆಗೆ ಕನ್ನಡ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಿವೆ’ ಎಂದರು.</p>.<p>ಇದೇ ಸಂದರ್ಭದಲ್ಲಿ ನಿಕಟಪೂರ್ವ ಯುವ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಸವರಾಜ ಬಲ್ಲೂರ ಅವರು ಎರಡನೇ ಯುವ ಸಾಹಿತ್ಯ ಸಮ್ಮೇಳನಾಧ್ಯಕ್ಷ ನಿಜಲಿಂಗ ರಗಟೆ ಅವರಿಗೆ ಪರಿಷತ್ ಧ್ವಜ ಹಸ್ತಾಂತರ ಮಾಡಿದರು.<br /><br /><strong>ಧ್ವಜಾರೋಹಣ:</strong><br />ಡಾ.ಚನ್ನಬಸವಪಟ್ಟದ್ದೇವರು ಜಿಲ್ಲಾ ರಂಗ ಮಂದಿರದ ಆವರಣದಲ್ಲಿ ಬೆಳಿಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ರಾಷ್ಟ್ರಧ್ವಜ, ಕಸಾಪ ಜಿಲ್ಲಾ ಘಟಕದ ಕೋಶಾಧ್ಯಕ್ಷ ಟಿ.ಎಂ.ಮಚ್ಛೆ ನಾಡಧ್ವಜ ಹಾಗೂ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಮನೋಹರ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು.</p>.<p>ರಂಗ ಮಂದಿರದ ಆವರಣದಲ್ಲಿ ಪುಸ್ತಕ ಮಳಿಗೆಗಳನ್ನು ತೆರೆಯಲಾಗಿತ್ತು. ಚಿತ್ರಕಲಾ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಜಾವಾಣಿ ವಾರ್ತೆ<br />ಬೀದರ್:</strong> ‘ಸಾಹಿತಿಗಳಿಂದ ಜನಪ್ರಿಯ ಸಾಹಿತ್ಯ ಮಾತ್ರ ರಚನೆಯಾಗುತ್ತಿದೆ. ಆದರೆ, ಜೀವಪರ ಹಾಗೂ ಜನಪರ ಸಾಹಿತ್ಯ ಹೊರ ಬರುತ್ತಿಲ್ಲ’ ಎಂದು ಕಲಬುರ್ಗಿಯ ಸಾಹಿತಿ ಕಾವ್ಯಶ್ರೀ ಮಹಾಗಾಂವಕರ್ ವಿಷಾದ ವ್ಯಕ್ತಪಡಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಬೀದರ್ ತಾಲ್ಲೂಕು ಘಟಕದ ವತಿಯಿಂದ ಇಲ್ಲಿಯ ಡಾ.ಚನ್ನಬಸವ ಪಟ್ಟದ್ದೇವರ ಜಿಲ್ಲಾ ರಂಗ ಮಂದಿರದಲ್ಲಿ ಗುರುವಾರ ನಡೆದ ನಡೆದ ತಾಲ್ಲೂಕು ಮಟ್ಟದ ಎರಡನೆಯ ಯುವ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಾಹಿತ್ಯ ಸಮ್ಮೇಳನಗಳು ಕಲೆ, ಸಾಹಿತ್ಯ, ಸಂಸ್ಕೃತಿಯ ಪ್ರತೀಕವಾಗಿದೆ. ಯಾವ ದೇಶದಲ್ಲಿ ಬಡತನ, ಹಸಿವು, ಹೋರಾಟ, ಸಂಘರ್ಷವಿದೆಯೋ? ಆ ದೇಶದಲ್ಲಿ ಗಟ್ಟಿ ಸಾಹಿತ್ಯ ಹುಟ್ಟುತ್ತದೆ ಎನ್ನುವುದು ಹಿರಿಯ ಆಂಗ್ಲ ಸಾಹಿತಿಗಳ ಅನಿಸಿಕೆಯಾಗಿದೆ. ಈಗಿನ ಯುವಪೀಳಿಗೆಗೆ ಬಡತನ, ಹಸಿವು, ಹೋರಾಟ ಮತ್ತು ಸಂಘರ್ಷದ ಗಂದ-ಗಾಳಿಯೂ ಗೊತ್ತಿಲ್ಲ. ಬಹುಶಃ ಈ ಕಾರಣಕ್ಕಾಗಿಯೇ ಯುವ ಪೀಳಿಗೆಯ ಜೀವನ ದಾರಿ ತಪ್ಪುತ್ತಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಯುವ ಸಮುದಾಯದವರು ಮೊಬೈಲ್, ವಾಟ್ಸ್ಆ್ಯಪ್, ಫೇಸ್ಬುಕ್, ಟ್ವಿಟ್ಟರ್, ಇಂಟರ್ನೆಟ್ ಗುಲಾಮರಾಗುತ್ತಿದ್ದಾರೆ.<br />ತನ್ನತನವನ್ನು ಕಳೆದುಕೊಂಡು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ದೇಶದ ಯುವ ಜನಾಂಗವನ್ನು ಸರಿದಾರಿಗೆ ತರವಂತಹ ಸಾಹಿತ್ಯ ರಚಿಸುವುದು ಇಂದಿನ ಅಗತ್ಯವಾಗಿದೆ’ ಎಂದರು.</p>.<p>‘ಬುದ್ಧ-ಬಸವ-ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದರೆ, ಜೀವನ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಜಿಲ್ಲೆಯ ಸಂಘ-ಸಂಸ್ಥೆಗಳ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಮಾತನಾಡಿ, ‘ಯುವ ಸಾಹಿತ್ಯ ಸಮ್ಮೇಳದ ಜತೆಗೆ ಮಕ್ಕಳ ಸಾಹಿತ್ಯ ಸಮ್ಮೇಳನವೂ ನಡೆಯಬೇಕು. ಕನ್ನಡ ಭಾಷಾ ಬೆಳವಣಿಗೆಗೆ ಕನ್ನಡ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಿವೆ’ ಎಂದರು.</p>.<p>ಇದೇ ಸಂದರ್ಭದಲ್ಲಿ ನಿಕಟಪೂರ್ವ ಯುವ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಸವರಾಜ ಬಲ್ಲೂರ ಅವರು ಎರಡನೇ ಯುವ ಸಾಹಿತ್ಯ ಸಮ್ಮೇಳನಾಧ್ಯಕ್ಷ ನಿಜಲಿಂಗ ರಗಟೆ ಅವರಿಗೆ ಪರಿಷತ್ ಧ್ವಜ ಹಸ್ತಾಂತರ ಮಾಡಿದರು.<br /><br /><strong>ಧ್ವಜಾರೋಹಣ:</strong><br />ಡಾ.ಚನ್ನಬಸವಪಟ್ಟದ್ದೇವರು ಜಿಲ್ಲಾ ರಂಗ ಮಂದಿರದ ಆವರಣದಲ್ಲಿ ಬೆಳಿಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ರಾಷ್ಟ್ರಧ್ವಜ, ಕಸಾಪ ಜಿಲ್ಲಾ ಘಟಕದ ಕೋಶಾಧ್ಯಕ್ಷ ಟಿ.ಎಂ.ಮಚ್ಛೆ ನಾಡಧ್ವಜ ಹಾಗೂ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಮನೋಹರ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು.</p>.<p>ರಂಗ ಮಂದಿರದ ಆವರಣದಲ್ಲಿ ಪುಸ್ತಕ ಮಳಿಗೆಗಳನ್ನು ತೆರೆಯಲಾಗಿತ್ತು. ಚಿತ್ರಕಲಾ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>