ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯ್ ಶರ್ಮಾ ಮಾತನಾಡಿ, ಅನಗತ್ಯ ಖರ್ಚಿಲ್ಲದೆ ಶಾಸಕನಾಗುವುದು ಆಮ್ ಆದ್ಮಿ ಪಕ್ಷದಲ್ಲಿ ಮಾತ್ರ. ದೆಹಲಿಯಲ್ಲಿ ಅಭಿವೃದ್ಧಿಗೆ ಜನ ಆಶೀರ್ವಾದ ಮಾಡಿದ್ದಾರೆ. ಅಸ್ಸಾಂ, ಪಂಜಾಬ್, ಹರಿಯಾಣ, ಗುಜರಾತ್ ಗಳಲ್ಲಿ ಈಗಾಗಲೇ ಆಮ್ ಆದ್ಮಿ ಪಕ್ಷ ತನ್ನ ಖಾತೆ ತೆರೆದಿದೆ. ರಾಜ್ಯದಲ್ಲಿ ಅಧಿಕಾರ ಹಿಡಿದು ಸ್ವಚ್ಛ ಮತ್ತು ಪರಿಶುದ್ಧ ಆಡಳಿತ ನೀಡುವ ಗುರಿ ಹೊಂದಿದೆ ಎಂದರು.