‘ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮ ತಡೆಯಲು ಜಿಲ್ಲೆಯಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಹುಮನಾಬಾದ್ ತಾಲ್ಲೂಕಿನ ಕೊಡಂಬಲ್–ಐನಾಪುರ ಕಲಬುರಗಿ ಗಡಿ ಪ್ರದೇಶದ ಚೆಕ್ಪೋಸ್ಟ್ಗೆ ಮಾ. 15ರಂದು ಭೇಟಿ ನೀಡಿದಾಗ ಮೊಹಮ್ಮದ್ ಸಲೀಂ ಗೈರಾಗಿದ್ದರು. ಯಾವುದೇ ಮುನ್ಸೂಚನೆ ನೀಡದೆ, ಮೇಲಧಿಕಾರಿಗಳ ಅನುಮತಿ ಪಡೆಯದೆ ಕರ್ತ್ಯವಕ್ಕೆ ಗೈರಾಗಿದ್ದಾರೆ. ಬೇಜವಾಬ್ದಾರಿತನ ತೋರಿರುವುದರಿಂದ ಪ್ರಜಾಪ್ರತಿನಿಧಿ ಕಾಯ್ದೆಯಡಿ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಂಧಿಸಬೇಕು’ ಎಂದು ಗೋವಿಂದ ರೆಡ್ಡಿ ಗುರುವಾರ ಸೂಚಿಸಿದ್ದಾರೆ.