ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ಕೆಲಸಕ್ಕೆ ಗೈರು: ಬಂಧನಕ್ಕೆ ಡಿಸಿ ಆದೇಶ

Published 21 ಮಾರ್ಚ್ 2024, 16:25 IST
Last Updated 21 ಮಾರ್ಚ್ 2024, 16:25 IST
ಅಕ್ಷರ ಗಾತ್ರ

ಬೀದರ್‌: ಚುನಾವಣಾ ಕೆಲಸಕ್ಕೆ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಚಿಟಗುಪ್ಪ ತಾಲ್ಲೂಕು ನರೇಗಾ ಸಹಾಯಕ ನಿರ್ದೇಶಕ ಮೊಹಮ್ಮದ್‌ ಸಲೀಂ ಅವರನ್ನು ಬಂಧಿಸಿ ಹಾಜರುಪಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶಿಸಿದ್ದಾರೆ.

‘ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮ ತಡೆಯಲು ಜಿಲ್ಲೆಯಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಹುಮನಾಬಾದ್‌ ತಾಲ್ಲೂಕಿನ ಕೊಡಂಬಲ್‌–ಐನಾಪುರ ಕಲಬುರಗಿ ಗಡಿ ಪ್ರದೇಶದ ಚೆಕ್‌ಪೋಸ್ಟ್‌ಗೆ ಮಾ. 15ರಂದು ಭೇಟಿ ನೀಡಿದಾಗ ಮೊಹಮ್ಮದ್‌ ಸಲೀಂ ಗೈರಾಗಿದ್ದರು. ಯಾವುದೇ ಮುನ್ಸೂಚನೆ ನೀಡದೆ, ಮೇಲಧಿಕಾರಿಗಳ ಅನುಮತಿ ಪಡೆಯದೆ ಕರ್ತ್ಯವಕ್ಕೆ ಗೈರಾಗಿದ್ದಾರೆ. ಬೇಜವಾಬ್ದಾರಿತನ ತೋರಿರುವುದರಿಂದ ಪ್ರಜಾಪ್ರತಿನಿಧಿ ಕಾಯ್ದೆಯಡಿ ಅವರನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಂಧಿಸಬೇಕು’ ಎಂದು ಗೋವಿಂದ ರೆಡ್ಡಿ ಗುರುವಾರ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT