<p><strong>ಹುಮನಾಬಾದ್:</strong> ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಶೋಭಾ ಕಟ್ಟಿ ₹30 ಸಾವಿರ ಲಂಚ ಪಡೆಯುತ್ತಿರುವಾಗ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.</p>.<p>ಸೀತಾಗೇರಾ ಗ್ರಾಮದ ಅಂಗನವಾಡಿ ಕೇಂದ್ರದ ಶಿಕ್ಷಕಿ ಅಂಬಿಕಾ ಸಿದ್ದಾರ್ಥ ಡಾಂಗೆ ಅವರು ಘೋಡವಾಡಿ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆ ಮಾಡುವಂತೆ ಸಿಡಿಪಿಒ ಶೋಭಾ ಕಟ್ಟಿ ಅವರಿಗೆ ಹಲವಾರು ಬಾರಿ ಮನವಿಪತ್ರ ಸಲ್ಲಿಸಿದ್ದರು. ವರ್ಗಾವಣೆಗಾಗಿ ಸಿಡಿಪಿಒ ₹50 ಸಾವಿರ ಲಂಚದ ಬೇಡಿಕೆ ಇಟ್ಟಿದರು. ಮೊದಲ ಕಂತಿನಲ್ಲಿ ₹30 ಸಾವಿರ, ನಂತರ ₹20 ಸಾವಿರ ಕೂಡಬೇಕು ಎಂದು ಹೇಳಿದ್ದರಿಂದ ಅಂಬಿಕಾ ಅವರ ಪತಿ ಸಿದ್ದಾರ್ಥ ಡಾಂಗೆ ಎಸಿಬಿಗೆ ದೂರು ನೀಡಿದ್ದರು.</p>.<p>ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಮಹೇಶ ಮೇಘಣ್ಣನವರ, ಡಿವೈಎಸ್ಪಿ ವೀರೇಶ ಕರಡಿಗುಡ್ಡಾ, ಸಿಪಿಐ ಶರಣಬಸವಪ್ಪಾ ಕೊಡ್ಲಾ, ಸಿಪಿಐ ವೆಂಕಟೇಶ ಯಾಡಹಳ್ಳಿ ಅವರು ಶುಕ್ರವಾರ ದಾಳಿ ನಡೆಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಭ್ರಷ್ಟಾಚಾರ ನಿಗ್ರಹ ದಳದ ರಮೇಶ ಬೀಜಲವಾಡೆ, ಶ್ರೀಕಾಂತ ಸ್ವಾಮಿ, ಅನಿಲ್ಕುಮಾರ ಪರಶೆಟ್ಟಿ, ಕಿಶೋರ ಗಾಜರೆ, ಸರಸ್ವತಿ, ರಾಘವೇಂದ್ರವಿಠಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಶೋಭಾ ಕಟ್ಟಿ ₹30 ಸಾವಿರ ಲಂಚ ಪಡೆಯುತ್ತಿರುವಾಗ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.</p>.<p>ಸೀತಾಗೇರಾ ಗ್ರಾಮದ ಅಂಗನವಾಡಿ ಕೇಂದ್ರದ ಶಿಕ್ಷಕಿ ಅಂಬಿಕಾ ಸಿದ್ದಾರ್ಥ ಡಾಂಗೆ ಅವರು ಘೋಡವಾಡಿ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆ ಮಾಡುವಂತೆ ಸಿಡಿಪಿಒ ಶೋಭಾ ಕಟ್ಟಿ ಅವರಿಗೆ ಹಲವಾರು ಬಾರಿ ಮನವಿಪತ್ರ ಸಲ್ಲಿಸಿದ್ದರು. ವರ್ಗಾವಣೆಗಾಗಿ ಸಿಡಿಪಿಒ ₹50 ಸಾವಿರ ಲಂಚದ ಬೇಡಿಕೆ ಇಟ್ಟಿದರು. ಮೊದಲ ಕಂತಿನಲ್ಲಿ ₹30 ಸಾವಿರ, ನಂತರ ₹20 ಸಾವಿರ ಕೂಡಬೇಕು ಎಂದು ಹೇಳಿದ್ದರಿಂದ ಅಂಬಿಕಾ ಅವರ ಪತಿ ಸಿದ್ದಾರ್ಥ ಡಾಂಗೆ ಎಸಿಬಿಗೆ ದೂರು ನೀಡಿದ್ದರು.</p>.<p>ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಮಹೇಶ ಮೇಘಣ್ಣನವರ, ಡಿವೈಎಸ್ಪಿ ವೀರೇಶ ಕರಡಿಗುಡ್ಡಾ, ಸಿಪಿಐ ಶರಣಬಸವಪ್ಪಾ ಕೊಡ್ಲಾ, ಸಿಪಿಐ ವೆಂಕಟೇಶ ಯಾಡಹಳ್ಳಿ ಅವರು ಶುಕ್ರವಾರ ದಾಳಿ ನಡೆಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಭ್ರಷ್ಟಾಚಾರ ನಿಗ್ರಹ ದಳದ ರಮೇಶ ಬೀಜಲವಾಡೆ, ಶ್ರೀಕಾಂತ ಸ್ವಾಮಿ, ಅನಿಲ್ಕುಮಾರ ಪರಶೆಟ್ಟಿ, ಕಿಶೋರ ಗಾಜರೆ, ಸರಸ್ವತಿ, ರಾಘವೇಂದ್ರವಿಠಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>