ಬೀದರ್: ಅನಾರೋಗ್ಯದಿಂದ ಬಳಲುತ್ತಿದ್ದ ಕೈದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲು ₹90 ಸಾವಿರ ಲಂಚ ಕೇಳಿ ಪಡೆಯುತ್ತಿದ್ದ ಜೈಲರ್ ಬಸವರಾಜ್ ಹೊಸಗೌಡರ ಸೋಮವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಂತೆ ಕೈದಿಯೊಬ್ಬರು ಜೈಲರ್ಗೆ ಮನವಿ ಮಾಡಿದ್ದರು. ಅದಕ್ಕೆ ಅವರು ₹90 ಸಾವಿರ ಬೇಡಿಕೆ ಇಟ್ಟಿದ್ದರು. ಹೀಗಾಗಿ ಕೈದಿಯ ಪುತ್ರ ಆದರ್ಶ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು.
ಜೈಲರ್ ಬಸವರಾಜ್ ಅವರು ಹಣ ಪಡೆಯುತ್ತಿದ್ದಾಗ ಎಸಿಬಿ ಡಿವೈಎಸ್ಪಿ ಹಣಮಂತರಾಯ, ಇನ್ಸ್ಪೆಕ್ಟರ್ಗಳಾದ ವೆಂಕಟೇಶ, ಶರಣಬಸಪ್ಪ ಕೋಡಲಾ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.