ಬೀದರ್: ಇಲ್ಲಿಯ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಸಹಾಯಕ ಹಣಕಾಸು ಅಧಿಕಾರಿ ಮೃತ್ಯುಂಜಯ ಚನ್ನಬಸಯ್ಯ ತಿರಾಣಿ ಅವರ ಮನೆ ಮೇಲೆ ಶುಕ್ರವಾರ ಎಸಿಬಿ ದಾಳಿ ನಡೆಸಿದ್ದಾರೆ.
ಮೃತ್ಯುಂಜಯ ಅವರು ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಹಾಗಾಂವ ಗ್ರಾಮದವರು. 2013ರಲ್ಲಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಹುದ್ದೆಗೆ ನೇಮಕಗೊಂಡಿದ್ದರು. ಇವರ ವಿರುದ್ಧ ಅನೇಕ ಭ್ರಷ್ಟಾಚಾರದ ಆರೋಪಗಳು ಇದ್ದವು. ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ ಕಲಬುರಗಿ, ಮಹಾಗಾಂವ ಹಾಗೂ ಬೀದರ್ನಲ್ಲಿರುವ ಅವರ ಮನೆಗಳ ಮೇಲೆ ದಾಳಿ ಮಾಡಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ.