ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ಪ್ರತಿನಿಧಿಗಳಿಂದ ಪ್ರತಿಜ್ಞೆ ಸ್ವೀಕಾರ

ಬೀದರ್‌ನ ಗುರುನಾನಕ ಪಬ್ಲಿಕ್ ಶಾಲೆ
Last Updated 10 ಆಗಸ್ಟ್ 2021, 15:25 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ನೆಹರೂ ಕ್ರೀಡಾಂಗಣ ಸಮೀಪ ಇರುವ ಗುರುನಾನಕ ಪಬ್ಲಿಕ್ ಶಾಲೆಯಲ್ಲಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕ, ಉಪ ನಾಯಕ, ವಿದ್ಯಾರ್ಥಿನಿ ನಾಯಕಿ, ಉಪ ನಾಯಕಿಯರ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಸೇವಾ ಕಾರ್ಯವನ್ನು ಶಾಲಾ ಹಂತದಿಂದಲೇ ಆರಂಭಿಸಬೇಕು. ಮುಂದೆ ದೇಶ ಸೇವೆಗೆ ಸಿದ್ಧರಾಗಬೇಕು ಎಂದು ಪ್ರತಿಜ್ಞೆ ಬೋಧಿಸಿದ ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಹೇಳಿದರು.

ಸಾಧನೆಗೆ ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಪರಿಶ್ರಮ, ಶಿಸ್ತು, ಪರೋಪಕಾರದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ವಿದ್ಯಾರ್ಥಿಗಳು ಒಳ್ಳೆಯ ನಾಗರಿಕರಾಗಬೇಕು ಎಂದು ಪಶು ವೈದ್ಯಕೀಯ ಕಾಲೇಜಿನ ಡಾ. ಬಿ.ವಿ. ಶಿವ್ರಪಕಾಶ ಹೇಳಿದರು.
ಪ್ರಾಚಾರ್ಯ ಎನ್. ರಾಜು, ಪವನಪ್ರಿಯ, ಅಮಜದ್ ಅಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT