ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ: ಅಪಘಾತ; ಇಬ್ಬರ ಸಾವು

Last Updated 9 ಆಗಸ್ಟ್ 2021, 4:27 IST
ಅಕ್ಷರ ಗಾತ್ರ

ಬಸವಕಲ್ಯಾಣ: ಸಸ್ತಾಪುರ ಹತ್ತಿರದ ರಾಷ್ಟ್ರೀಯ ‌ಹೆದ್ದಾರಿಯಲ್ಲಿನ ಖಾಂಡ ಸಾರಿ‌ ಕಾರ್ಖಾನೆ ಹತ್ತಿರ ಭಾನುವಾರ ವಾಹನ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ತಳಭೋಗದ ಗೋವಿಂದ ಸಸಾನೆ (40) ಹಾಗೂ ಸಸ್ತಾಪುರದ ಕಲಾವತಿ ವಿಜಯಕುಮಾರ (41) ಮೃತರು. ತಳಭೋಗದಿಂದ ದ್ವಿಚಕ್ರ ವಾಹನದಲ್ಲಿ ಸಸ್ತಾಪುರಕ್ಕೆ‌ ಹೋಗುವಾಗ ಅಪರಿಚಿತ ಕಾರ್ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆ ಮಂಜುಳಾಬಾಯಿ ಗಾಯಗೊಂಡಿದ್ದು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಇಲ್ಲಿನ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT