ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಬ್ಯಾಂಕ್ ವ್ಯವಸ್ಥಾಪಕ ಸಾವು

Last Updated 23 ನವೆಂಬರ್ 2022, 15:39 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ಬಗದಲ್ ಧರಿ ಸಮೀಪ ಬೀದರ್-ಮನ್ನಾಎಖ್ಖೆಳ್ಳಿ ರಸ್ತೆಯಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಬುಧವಾರ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‍ನ ಬೇಮಳಖೇಡ ಶಾಖೆಯ ವ್ಯವಸ್ಥಾಪಕ ಚಕ್ರಪಾಣಿ (30) ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದರು. ಚಕ್ರಪಾಣಿ ಅವರು ಮೂಲತಃ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯವರು.

ಘಟನಾ ಸ್ಥಳಕ್ಕೆ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಸಂಗೀತಾ ಭೇಟಿ ನೀಡಿ ಪರಿಶೀಲಿಸಿದರು. ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT