<p><strong>ಬೀದರ್:</strong> ಉತ್ತರ ಪ್ರದೇಶದ ವಾರಾಣಸಿ ಸಮೀಪ ಶುಕ್ರವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನ ಐದು ಜನ ಸಾವನಪ್ಪಿದ್ದಾರೆ. ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ನಗರದ ಲಾಡಗೇರಿ ನಿವಾಸಿಗಳಾದ ಲಕ್ಷ್ಮಿ (57), ನೀಲಮ್ಮಾ (62), ಸಂತೋಷಕುಮಾರ (45), ಸುನೀತಾ (40), ಕಲಾವತಿ ಹ (40) ಮೃತಪಟ್ಟವರು.</p>.<p>ಸುಲೋಚನಾ, ಸುಜಾತ, ಕವಿತಾ, ಅನಿತಾ, ಖುಷಿ, ಗಣೇಶ, ಸಾಯಿ, ಭಗವಂತ ಹಾಗೂ ಶಿವಾ ಗಾಯಗೊಂಡವರು.</p>.<p>ವಾರಾಣಸಿಯ ರೂಪಾಪೂರ ಬಳಿ ಶುಕ್ರವಾರ ನಸುಕಿನ ಜಾವ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕುಂಭಮೇಳದ ಭಕ್ತರಿದ್ದ ಕ್ರೂಸರ್ ಡಿಕ್ಕಿ ಹೊಡೆದಿದ್ದು, ವಾಹನ ನುಜ್ಜುಗುಜ್ಜಾಗಿದೆ. ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. </p> <p>ಫೆ. 18ರಂದು ಬೀದರ್ ನಿಂದ ಪ್ರಯಾಗರಾಜ್ ಗೆ ತೆರಳಿದ್ದರು. ಕುಂಭಮೇಳದ ಪುಣ್ಯಸ್ನಾನ ಮಾಡಿ, ವಾರಾಣಸಿಗೆ ಭೇಟಿ ಕೊಟ್ಟು ಹಿಂತಿರುಗುವಾಗ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಉತ್ತರ ಪ್ರದೇಶದ ವಾರಾಣಸಿ ಸಮೀಪ ಶುಕ್ರವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನ ಐದು ಜನ ಸಾವನಪ್ಪಿದ್ದಾರೆ. ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ನಗರದ ಲಾಡಗೇರಿ ನಿವಾಸಿಗಳಾದ ಲಕ್ಷ್ಮಿ (57), ನೀಲಮ್ಮಾ (62), ಸಂತೋಷಕುಮಾರ (45), ಸುನೀತಾ (40), ಕಲಾವತಿ ಹ (40) ಮೃತಪಟ್ಟವರು.</p>.<p>ಸುಲೋಚನಾ, ಸುಜಾತ, ಕವಿತಾ, ಅನಿತಾ, ಖುಷಿ, ಗಣೇಶ, ಸಾಯಿ, ಭಗವಂತ ಹಾಗೂ ಶಿವಾ ಗಾಯಗೊಂಡವರು.</p>.<p>ವಾರಾಣಸಿಯ ರೂಪಾಪೂರ ಬಳಿ ಶುಕ್ರವಾರ ನಸುಕಿನ ಜಾವ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕುಂಭಮೇಳದ ಭಕ್ತರಿದ್ದ ಕ್ರೂಸರ್ ಡಿಕ್ಕಿ ಹೊಡೆದಿದ್ದು, ವಾಹನ ನುಜ್ಜುಗುಜ್ಜಾಗಿದೆ. ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. </p> <p>ಫೆ. 18ರಂದು ಬೀದರ್ ನಿಂದ ಪ್ರಯಾಗರಾಜ್ ಗೆ ತೆರಳಿದ್ದರು. ಕುಂಭಮೇಳದ ಪುಣ್ಯಸ್ನಾನ ಮಾಡಿ, ವಾರಾಣಸಿಗೆ ಭೇಟಿ ಕೊಟ್ಟು ಹಿಂತಿರುಗುವಾಗ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>