ಸದ್ಯ ಜಿಲ್ಲಾಧಿಕಾರಿ ಕಾರ್ಖಾನೆ ಆಡಳಿತಾಧಿಕಾರಿ ಆಗಿದ್ದಾರೆ. ಕೂಡಲೇ ಪಂಚಾಯಿತಿ ಮಟ್ಟದಲ್ಲಿ ಆನ್ಲೈನ್ನಲ್ಲಿ ಕಾರ್ಖಾನೆಯ ಸರ್ವ ಸದಸ್ಯರ ಸಭೆ ನಡೆಸಿ ನಿರ್ಣಯ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಕಾರ್ಖಾನೆಯನ್ನು ಲೀಸ್ ಮೇಲೆ ಕೊಡುವ ಕುರಿತು ಸಹ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಸಕ್ಕರೆ ಆಯುಕ್ತ ಅಕ್ರಂ ಪಾಶಾ ಸಭೆಯಲ್ಲಿ ಇದ್ದರು.