<p><strong>ಬೀದರ್: </strong>ಬೀದರ್ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿದ್ದಾರೆ.</p>.<p>ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.</p>.<p>ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಜಿಲ್ಲಾಧಿಕಾರಿ, ಸಂಘ ಸಂಸ್ಥೆಗಳು ಹಾಗೂ ಇತರ ಜನಪ್ರತಿನಿಧಿಗಳಿಂದ ಸ್ವೀಕೃತವಾಗುವ ಪ್ರಸ್ತಾವಗಳನ್ನು ಅನುದಾನ ಲಭ್ಯತೆಗೆ ಅನುಗುಣವಾಗಿ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಕರ್ನಾಟಕ ಪ್ರವಾಸೋದ್ಯಮ ನೀತಿ 2020-25 ರಡಿ ಗುರುತಿಸಲಾದ ಪ್ರವಾಸಿ ತಾಣಗಳಲ್ಲಿ ಬೀದರ್ನ ಪಾಪನಾಶ ದೇವಸ್ಥಾನ, ಚೌಖಂಡಿ, ಅಷ್ಟೂರಿನ ಬಹಮನಿ ಸುಲ್ತಾನರ ಗೊಮ್ಮಟಗಳು, ಭೂ ಕಾಲುವೆ, ಹುಮನಾಬಾದ್ ತಾಲ್ಲೂಕಿನ ಜಲಸಂಗಿ, ಬಸವಕಲ್ಯಾಣದ ಅನುಭವ ಮಂಟಪ, ನಾರಾಯಣಪುರ, ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಕೊಟೆ, ಕಾರಂಜಾ ಜಲಾಶಯಗಳು ಸೇರಿವೆ ಎಂದು ಹೇಳಿದ್ದಾರೆ.</p>.<p>ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ ಪ್ರವಾಸಿ ತಾಣಗಳ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 2008-09 ರಿಂದ 2018-19 ರ ವರೆಗೆ ₹ 132.16 ಕೋಟಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಬೀದರ್ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿದ್ದಾರೆ.</p>.<p>ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.</p>.<p>ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಜಿಲ್ಲಾಧಿಕಾರಿ, ಸಂಘ ಸಂಸ್ಥೆಗಳು ಹಾಗೂ ಇತರ ಜನಪ್ರತಿನಿಧಿಗಳಿಂದ ಸ್ವೀಕೃತವಾಗುವ ಪ್ರಸ್ತಾವಗಳನ್ನು ಅನುದಾನ ಲಭ್ಯತೆಗೆ ಅನುಗುಣವಾಗಿ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಕರ್ನಾಟಕ ಪ್ರವಾಸೋದ್ಯಮ ನೀತಿ 2020-25 ರಡಿ ಗುರುತಿಸಲಾದ ಪ್ರವಾಸಿ ತಾಣಗಳಲ್ಲಿ ಬೀದರ್ನ ಪಾಪನಾಶ ದೇವಸ್ಥಾನ, ಚೌಖಂಡಿ, ಅಷ್ಟೂರಿನ ಬಹಮನಿ ಸುಲ್ತಾನರ ಗೊಮ್ಮಟಗಳು, ಭೂ ಕಾಲುವೆ, ಹುಮನಾಬಾದ್ ತಾಲ್ಲೂಕಿನ ಜಲಸಂಗಿ, ಬಸವಕಲ್ಯಾಣದ ಅನುಭವ ಮಂಟಪ, ನಾರಾಯಣಪುರ, ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಕೊಟೆ, ಕಾರಂಜಾ ಜಲಾಶಯಗಳು ಸೇರಿವೆ ಎಂದು ಹೇಳಿದ್ದಾರೆ.</p>.<p>ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ ಪ್ರವಾಸಿ ತಾಣಗಳ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 2008-09 ರಿಂದ 2018-19 ರ ವರೆಗೆ ₹ 132.16 ಕೋಟಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>