ಶಾಸಕ ಬಿ.ನಾರಾಯಣರಾವ್ ಮಾತನಾಡಿ, `ಕೊಹಿನೂರ ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಬಟಗೇರಾ ಬಿಸಿಎಂ ವಿದ್ಯಾರ್ಥಿ ನಿಲಯದ ಹೊಸ ಕಟ್ಟಡಕ್ಕಾಗಿ ಪ್ರಸ್ತಾವ ಸಲ್ಲಿಸಬೇಕು. ಸಾರಿಗೆ ಅಧಿಕಾರಿಗಳು ವರ್ಷಕ್ಕೆ ನಿಗದಿಪಡಿಸಿದ ವಾಹನ ತೆರಿಗೆ ಸಂಗ್ರಹಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಪ್ರಯತ್ನಿಸಬೇಕು. ಕೊಹಿನೂರ ಬಹುಗ್ರಾಮ ನೀರು ಸರಬರಾಜು ಯೋಜನೆ ಕಾರ್ಯಗತಕ್ಕೆ ಸಂಬಂಧಿತರು ಪ್ರಯತ್ನಿಸಬೇಕು’ ಎಂದು ಸಲಹೆ ನೀಡಿದರು.