<p><strong>ಬೀದರ್</strong>: ಚಿತ್ರನಟ ಸುದೀಪ್ ಅವರ 47ನೇ ಜನ್ಮದಿನದ ಪ್ರಯುಕ್ತ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಿಂದ ನಗರದ ಮಹಾತ್ಮ ಜ್ಯೋತಿಬಾ ಫುಲೆ ವೃದ್ಧಾಶ್ರಮದಲ್ಲಿ ಇರುವ ಹಿರಿಯ ನಾಗರಿಕರಿಗೆ ಬಟ್ಟೆ, ಆಹಾರಧಾನ್ಯ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ಉಚಿತವಾಗಿ ವಿತರಿಸಲಾಯಿತು.</p>.<p>ಜೆಡಿಎಸ್ ಎಸ್ಸಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರ ಸೋನಿ ಮಾತನಾಡಿ, ಹಿರಿಯ ನಾಗರಿಕರು, ಬಡವರು, ನಿರ್ಗತಿಕರು, ಅನಾಥರಿಗೆ ನೆರವಾಗುವ ಮೂಲಕ ಸುದೀಪ್ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದ ಬಸವರಾಜ ಶಿವಪುರೆ ಮಾತನಾಡಿ, ಸುದೀಪ್ ಅವರು ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಬೇಕು ಎಂದು ಕರೆ ಕೊಟ್ಟಿದ್ದರು. ಅವರ ಆಶಯದಂತೆ ಹಲವರಿಗೆ ನೆರವು ಒದಗಿಸಲಾಗಿದೆ ಎಂದು ತಿಳಿಸಿದರು.</p>.<p>ರಜನೀಶ್ ಮದಳೆ, ಡಾ. ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಆ್ಯಂಡ್ ವೆಲ್ಫೇರ್ ಸೊಸೈಟಿ ಸಂಚಾಲಿತ ಮಹಾತ್ಮ ಜ್ಯೋತಿಬಾ ಫುಲೆ ವೃದ್ಧಾಶ್ರಮದ ಮೇಲ್ವಿಚಾರಕ ಬಾಲಾಜಿ ಮಾತನಾಡಿದರು.</p>.<p>ಆಕಾಶ ಸೋನಿ ಚಿದ್ರಿ, ಸುನೀಲ್ ಚಿದ್ರಿ, ಅಂಕುಶ ನಿಜಾಂಪುರ, ವಿಕ್ಕಿ ಕಿಚ್ಚ, ಅರುಣ, ಅಮೀತ್, ಚಂದು, ರಮೇಶ, ಸಂಗು, ವಿಶಾಲ ಚಿದ್ರಿ, ಪವನ, ಗಂಗಾಧರ, ನಾಗೇಶ, ಸತ್ಯ ಸಾವಿತ್ರಿ, ಸುಭಾಷ ರೆಡ್ಡಿ, ಸಚಿನ್, ಶಿವಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಚಿತ್ರನಟ ಸುದೀಪ್ ಅವರ 47ನೇ ಜನ್ಮದಿನದ ಪ್ರಯುಕ್ತ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಿಂದ ನಗರದ ಮಹಾತ್ಮ ಜ್ಯೋತಿಬಾ ಫುಲೆ ವೃದ್ಧಾಶ್ರಮದಲ್ಲಿ ಇರುವ ಹಿರಿಯ ನಾಗರಿಕರಿಗೆ ಬಟ್ಟೆ, ಆಹಾರಧಾನ್ಯ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ಉಚಿತವಾಗಿ ವಿತರಿಸಲಾಯಿತು.</p>.<p>ಜೆಡಿಎಸ್ ಎಸ್ಸಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರ ಸೋನಿ ಮಾತನಾಡಿ, ಹಿರಿಯ ನಾಗರಿಕರು, ಬಡವರು, ನಿರ್ಗತಿಕರು, ಅನಾಥರಿಗೆ ನೆರವಾಗುವ ಮೂಲಕ ಸುದೀಪ್ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದ ಬಸವರಾಜ ಶಿವಪುರೆ ಮಾತನಾಡಿ, ಸುದೀಪ್ ಅವರು ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಬೇಕು ಎಂದು ಕರೆ ಕೊಟ್ಟಿದ್ದರು. ಅವರ ಆಶಯದಂತೆ ಹಲವರಿಗೆ ನೆರವು ಒದಗಿಸಲಾಗಿದೆ ಎಂದು ತಿಳಿಸಿದರು.</p>.<p>ರಜನೀಶ್ ಮದಳೆ, ಡಾ. ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಆ್ಯಂಡ್ ವೆಲ್ಫೇರ್ ಸೊಸೈಟಿ ಸಂಚಾಲಿತ ಮಹಾತ್ಮ ಜ್ಯೋತಿಬಾ ಫುಲೆ ವೃದ್ಧಾಶ್ರಮದ ಮೇಲ್ವಿಚಾರಕ ಬಾಲಾಜಿ ಮಾತನಾಡಿದರು.</p>.<p>ಆಕಾಶ ಸೋನಿ ಚಿದ್ರಿ, ಸುನೀಲ್ ಚಿದ್ರಿ, ಅಂಕುಶ ನಿಜಾಂಪುರ, ವಿಕ್ಕಿ ಕಿಚ್ಚ, ಅರುಣ, ಅಮೀತ್, ಚಂದು, ರಮೇಶ, ಸಂಗು, ವಿಶಾಲ ಚಿದ್ರಿ, ಪವನ, ಗಂಗಾಧರ, ನಾಗೇಶ, ಸತ್ಯ ಸಾವಿತ್ರಿ, ಸುಭಾಷ ರೆಡ್ಡಿ, ಸಚಿನ್, ಶಿವಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>