ಬೀದರ್: ಚಿತ್ರನಟ ಸುದೀಪ್ ಅವರ 47ನೇ ಜನ್ಮದಿನದ ಪ್ರಯುಕ್ತ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಿಂದ ನಗರದ ಮಹಾತ್ಮ ಜ್ಯೋತಿಬಾ ಫುಲೆ ವೃದ್ಧಾಶ್ರಮದಲ್ಲಿ ಇರುವ ಹಿರಿಯ ನಾಗರಿಕರಿಗೆ ಬಟ್ಟೆ, ಆಹಾರಧಾನ್ಯ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ಉಚಿತವಾಗಿ ವಿತರಿಸಲಾಯಿತು.
ಜೆಡಿಎಸ್ ಎಸ್ಸಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರ ಸೋನಿ ಮಾತನಾಡಿ, ಹಿರಿಯ ನಾಗರಿಕರು, ಬಡವರು, ನಿರ್ಗತಿಕರು, ಅನಾಥರಿಗೆ ನೆರವಾಗುವ ಮೂಲಕ ಸುದೀಪ್ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದ ಬಸವರಾಜ ಶಿವಪುರೆ ಮಾತನಾಡಿ, ಸುದೀಪ್ ಅವರು ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಬೇಕು ಎಂದು ಕರೆ ಕೊಟ್ಟಿದ್ದರು. ಅವರ ಆಶಯದಂತೆ ಹಲವರಿಗೆ ನೆರವು ಒದಗಿಸಲಾಗಿದೆ ಎಂದು ತಿಳಿಸಿದರು.
ರಜನೀಶ್ ಮದಳೆ, ಡಾ. ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಆ್ಯಂಡ್ ವೆಲ್ಫೇರ್ ಸೊಸೈಟಿ ಸಂಚಾಲಿತ ಮಹಾತ್ಮ ಜ್ಯೋತಿಬಾ ಫುಲೆ ವೃದ್ಧಾಶ್ರಮದ ಮೇಲ್ವಿಚಾರಕ ಬಾಲಾಜಿ ಮಾತನಾಡಿದರು.
ಆಕಾಶ ಸೋನಿ ಚಿದ್ರಿ, ಸುನೀಲ್ ಚಿದ್ರಿ, ಅಂಕುಶ ನಿಜಾಂಪುರ, ವಿಕ್ಕಿ ಕಿಚ್ಚ, ಅರುಣ, ಅಮೀತ್, ಚಂದು, ರಮೇಶ, ಸಂಗು, ವಿಶಾಲ ಚಿದ್ರಿ, ಪವನ, ಗಂಗಾಧರ, ನಾಗೇಶ, ಸತ್ಯ ಸಾವಿತ್ರಿ, ಸುಭಾಷ ರೆಡ್ಡಿ, ಸಚಿನ್, ಶಿವಕುಮಾರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.