<p><strong>ಬೀದರ್:</strong> ‘ರೈತರು ಹೈನುಗಾರಿಕೆ, ಕೃಷಿ ಹಾಗೂ ತೋಟಗಾರಿಕೆಯಲ್ಲಿ ಹೊಸ ವಿಧಾನಗಳನ್ನು ಅನುಸರಿಸುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು. ಈ ದಿಸೆಯಲ್ಲಿ ತರಬೇತಿ ಕೇಂದ್ರದ ಸದುಪಯೋಗ ಪಡೆಯಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮನವಿ ಮಾಡಿದರು.</p>.<p>ನಗರದ ಜನವಾಡ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆವರಣದಲ್ಲಿ ನೂರು ರೈತರಿಗೆ ಏಕ ಕಾಲದಲ್ಲಿ ತರಬೇತಿ ನೀಡಲು ಅನುಕೂಲವಾಗುವಂತೆ ₹1.38 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ರೈತ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹೈನುಗಾರಿಕೆ ಮತ್ತು ಜಾನುವಾರು ಸಾಕಣೆಯಲ್ಲಿ ತೊಡಗಿಸಿಕೊಂಡವರಿಗೆ ಬೀದರ್ನಲ್ಲಿ ಆಯೋಜಿಸಿದ್ದ ಪಶು ಮೇಳದಿಂದಾಗಿ ಸಾಕಷ್ಟು ಅನುಕೂಲವಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಈ ರೈತ ತರಬೇತಿ ಕೇಂದ್ರದಿಂದಲೂ ರೈತರಿಗೆ ವಿವಿಧ ರೀತಿಯಲ್ಲಿ ತರಬೇತಿ ಸಿಗಬೇಕು’ ಎಂದು ಹೇಳಿದರು.</p>.<p>ಶಾಸಕ ರಹೀಂ ಖಾನ್ ಮಾತನಾಡಿ, ‘ಕೃಷಿಯಲ್ಲಿ ರೈತರು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಹಾಗೂ ಮಾಹಿತಿ ಪಡೆದುಕೊಳ್ಳಲು ರೈತ ತರಬೇತಿ ಕೇಂದ್ರ ಹೆಚ್ಚು ಅನುಕೂಲವಾಗಲಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಂಚಿನಾಳ, ರೈತ ತರಬೇತಿ ಕೇಂದ್ರದ ಅಧಿಕಾರಿ ಉದಯಕುಮಾರ, ಪಶು ವೈದ್ಯಾಧಿಕಾರಿ ಡಾ.ಗೌತಮ ಅರಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ರೈತರು ಹೈನುಗಾರಿಕೆ, ಕೃಷಿ ಹಾಗೂ ತೋಟಗಾರಿಕೆಯಲ್ಲಿ ಹೊಸ ವಿಧಾನಗಳನ್ನು ಅನುಸರಿಸುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು. ಈ ದಿಸೆಯಲ್ಲಿ ತರಬೇತಿ ಕೇಂದ್ರದ ಸದುಪಯೋಗ ಪಡೆಯಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮನವಿ ಮಾಡಿದರು.</p>.<p>ನಗರದ ಜನವಾಡ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆವರಣದಲ್ಲಿ ನೂರು ರೈತರಿಗೆ ಏಕ ಕಾಲದಲ್ಲಿ ತರಬೇತಿ ನೀಡಲು ಅನುಕೂಲವಾಗುವಂತೆ ₹1.38 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ರೈತ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹೈನುಗಾರಿಕೆ ಮತ್ತು ಜಾನುವಾರು ಸಾಕಣೆಯಲ್ಲಿ ತೊಡಗಿಸಿಕೊಂಡವರಿಗೆ ಬೀದರ್ನಲ್ಲಿ ಆಯೋಜಿಸಿದ್ದ ಪಶು ಮೇಳದಿಂದಾಗಿ ಸಾಕಷ್ಟು ಅನುಕೂಲವಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಈ ರೈತ ತರಬೇತಿ ಕೇಂದ್ರದಿಂದಲೂ ರೈತರಿಗೆ ವಿವಿಧ ರೀತಿಯಲ್ಲಿ ತರಬೇತಿ ಸಿಗಬೇಕು’ ಎಂದು ಹೇಳಿದರು.</p>.<p>ಶಾಸಕ ರಹೀಂ ಖಾನ್ ಮಾತನಾಡಿ, ‘ಕೃಷಿಯಲ್ಲಿ ರೈತರು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಹಾಗೂ ಮಾಹಿತಿ ಪಡೆದುಕೊಳ್ಳಲು ರೈತ ತರಬೇತಿ ಕೇಂದ್ರ ಹೆಚ್ಚು ಅನುಕೂಲವಾಗಲಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಂಚಿನಾಳ, ರೈತ ತರಬೇತಿ ಕೇಂದ್ರದ ಅಧಿಕಾರಿ ಉದಯಕುಮಾರ, ಪಶು ವೈದ್ಯಾಧಿಕಾರಿ ಡಾ.ಗೌತಮ ಅರಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>