<p>ಭಾಲ್ಕಿ: ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭಕ್ಕೆ ವಿರೋಧಿಸಿ ಪಟ್ಟಣದಲ್ಲಿ ಸಂಸದ ಸಾಗರ್ ಖಂಡ್ರೆ ಅವರ ಮನೆ ಮುಂದೆ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ಸಾಗರ್ ಖಂಡ್ರೆ ಅವರು, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹುದ್ದೆ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿದೆ. ನಮ್ಮ ಸರ್ಕಾರ ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮಗಳು ನೀಡುತ್ತಿದೆ ಎಂದು ತಿಳಿಸಿದರು.</p>.<p>ನಿಮ್ಮ ಆತಂಕ ಯುಕೆಜಿ, ಎಲ್ಕೆಜಿ ಆರಂಭದಿಂದ ಅಂಗನವಾಡಿ ಮುಚ್ಚುತ್ತವೆ ಎಂಬುದಾಗಿದೆ. ಆದರೆ, ಕಾಂಗ್ರೆಸ್ ಸರ್ಕಾರ ಯಾವ ಅಂಗನವಾಡಿ ಕೇಂದ್ರಗಳನ್ನೂ ಮುಚ್ಚಲು ಬಿಡುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯಕ್ರಮ ರೂಪಿಸುವಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>’ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಎಲ್ಕೆಜಿ ಯುಕೆಜಿ ನಡೆಸುವ ಆದೇಶ ಹಿಂಪಡೆಯುವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ’ ಎಂದು ಅಂಗನವಾಡಿ ಕಾರ್ಯಕರ್ತರ ಜಿಲ್ಲಾಧ್ಯಕ್ಷೆ ಸುಶೀಲಾ ಹತ್ತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭಕ್ಕೆ ವಿರೋಧಿಸಿ ಪಟ್ಟಣದಲ್ಲಿ ಸಂಸದ ಸಾಗರ್ ಖಂಡ್ರೆ ಅವರ ಮನೆ ಮುಂದೆ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ಸಾಗರ್ ಖಂಡ್ರೆ ಅವರು, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹುದ್ದೆ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿದೆ. ನಮ್ಮ ಸರ್ಕಾರ ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮಗಳು ನೀಡುತ್ತಿದೆ ಎಂದು ತಿಳಿಸಿದರು.</p>.<p>ನಿಮ್ಮ ಆತಂಕ ಯುಕೆಜಿ, ಎಲ್ಕೆಜಿ ಆರಂಭದಿಂದ ಅಂಗನವಾಡಿ ಮುಚ್ಚುತ್ತವೆ ಎಂಬುದಾಗಿದೆ. ಆದರೆ, ಕಾಂಗ್ರೆಸ್ ಸರ್ಕಾರ ಯಾವ ಅಂಗನವಾಡಿ ಕೇಂದ್ರಗಳನ್ನೂ ಮುಚ್ಚಲು ಬಿಡುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯಕ್ರಮ ರೂಪಿಸುವಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>’ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಎಲ್ಕೆಜಿ ಯುಕೆಜಿ ನಡೆಸುವ ಆದೇಶ ಹಿಂಪಡೆಯುವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ’ ಎಂದು ಅಂಗನವಾಡಿ ಕಾರ್ಯಕರ್ತರ ಜಿಲ್ಲಾಧ್ಯಕ್ಷೆ ಸುಶೀಲಾ ಹತ್ತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>