ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲ ಹೆಚ್ಚಿಸಿಕೊಳ್ಳಲು ವಾಯು ಸೇನಾನಿಗಳಿಗೆ ಸಲಹೆ

Last Updated 18 ಆಗಸ್ಟ್ 2021, 13:51 IST
ಅಕ್ಷರ ಗಾತ್ರ

ಬೀದರ್: ಯುವ ವಾಯು ಸೇನಾನಿಗಳು ತಮ್ಮ ಕೌಶಲ ಹೆಚ್ಚಿಸಿಕೊಳ್ಳಲು ಒತ್ತು ಕೊಡಬೇಕು ಎಂದು ಭಾರತೀಯ ವಾಯು ಸೇನೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ವಿ.ಆರ್. ಚೌಧರಿ ಸಲಹೆ ಮಾಡಿದರು.

ಇಲ್ಲಿಯ ವಾಯುಪಡೆ ತರಬೇತಿ ಕೇಂದ್ರದಲ್ಲಿ ನಡೆದ ಪೈಲಟ್ ಹಾಗೂ ಆಯುಧ ವ್ಯವಸ್ಥೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೋವಿಡ್ ನಡುವೆಯೂ ತರಬೇತಿಯನ್ನು ಸಕಾಲಕ್ಕೆ ಪೂರ್ಣಗೊಳಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.

ತರಬೇತಿಯಲ್ಲಿ ತೇರ್ಗಡೆಯಾದವರಿಗೆ ಪ್ರಮಾಣ ಪತ್ರ ಹಾಗೂ ಪದಕ ವಿತರಿಸಲಾಯಿತು.

ಬೀದರ್ ವಾಯು ಪಡೆ ತರಬೇತಿ ಕೇಂದ್ರದ ಮುಖ್ಯಸ್ಥ ಸಮೀರ್ ಸೋಂಧಿ ಅವರು ಚೌಧರಿ ಅವರಿಗೆ ಕೇಂದ್ರದ ಬಗ್ಗೆ ವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT