<p><strong>ಬೀದರ್: </strong>ಮಕ್ಕಳು ಹಾಗೂ ಮಹಿಳೆಯರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ಜಾರಿಗೊಳಿಸಿರುವ ಪೋಷಣಾ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೋಷಣಾ ಅಭಿಯಾನ ಯೋಜನೆಯ ಜಿಲ್ಲಾಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಆರೋಗ್ಯ ಇಲಾಖೆಯೊಂದಿಗೆ ನಿಯಮಿತವಾಗಿ ಗರ್ಭಿಣಿ, ಬಾಣಂತಿ, ಹದಿಹರೆಯದ ಹೆಣ್ಣುಮಕ್ಕಳ ಹಿಮೊಗ್ಲೋಬಿನ್ ತಪಾಸಣೆ ಮಾಡಬೇಕು. ಜನನದ ವೇಳೆ ಕಡಿಮೆ ತೂಕ ಹೊಂದಿರುವ ಮಕ್ಕಳನ್ನು ಗುರುತಿಸಬೇಕು. ಪೋಷಕರಿಗೆ ಅಶಕ್ತ ನವಜಾತ ಮಗುವಿನ ಆರೈಕೆ ಕುರಿತು ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.</p>.<p>ಆರು ವರ್ಷದೊಳಗಿನ ಮಕ್ಕಳ ಬೆಳವಣಿಗೆ ಕಂಠಿತ, ಕಡಿಮೆ ತೂಕದ ಮಕ್ಕಳ ಜನನ, 6 ರಿಂದ 59 ತಿಂಗಳ ಒಳಗಿನ ಮಕ್ಕಳು, 15 ರಿಂದ 49 ವರ್ಷದ ಕಿಶೋರಿ ಅಥವಾ ಮಹಿಳೆಯರಲ್ಲಿ ಉಂಟಾಗುವ ರಕ್ತ ಹೀನತೆಯನ್ನು ತಡೆಗಟ್ಟುವ ಯೋಜನೆಯ ಉದ್ದೇಶ ಸಾಕಾರಕ್ಕೆ ಅಧಿಕಾರಿಗಳು ಶಕ್ತಿಮೀರಿ ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾಯಕರ್ತೆಯರಿಗೆ ಮೊಬೈಲ್ ಹಾಗೂ ಇತರ ಪರಿಕರಗಳನ್ನು ಸರಿಯಾಗಿ ವಿತರಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ 2018-19ರಿಂದ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಈವರೆಗೆ ಸಮುದಾಯ ಆಧಾರಿತ ಅನೇಕ ಚಟುವಟಿಕೆಗಳನ್ನು ಆಯೋಜಿಸಿ ಸುಮಾರು ನಾಲ್ಕು ಲಕ್ಷ ಫಲಾನುಭವಿಗಳಿಗೆ ಪೌಷ್ಟಿಕ ಆಹಾರದ ಕುರಿತು ಅರಿವು ಮೂಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಉಪ ವಿಭಾಗಾಧಿಕಾರಿಗಳಾದ ಭುವನೇಶ ಪಾಟೀಲ, ಗರಿಮಾ ಪನ್ವಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಮಕ್ಕಳು ಹಾಗೂ ಮಹಿಳೆಯರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ಜಾರಿಗೊಳಿಸಿರುವ ಪೋಷಣಾ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೋಷಣಾ ಅಭಿಯಾನ ಯೋಜನೆಯ ಜಿಲ್ಲಾಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಆರೋಗ್ಯ ಇಲಾಖೆಯೊಂದಿಗೆ ನಿಯಮಿತವಾಗಿ ಗರ್ಭಿಣಿ, ಬಾಣಂತಿ, ಹದಿಹರೆಯದ ಹೆಣ್ಣುಮಕ್ಕಳ ಹಿಮೊಗ್ಲೋಬಿನ್ ತಪಾಸಣೆ ಮಾಡಬೇಕು. ಜನನದ ವೇಳೆ ಕಡಿಮೆ ತೂಕ ಹೊಂದಿರುವ ಮಕ್ಕಳನ್ನು ಗುರುತಿಸಬೇಕು. ಪೋಷಕರಿಗೆ ಅಶಕ್ತ ನವಜಾತ ಮಗುವಿನ ಆರೈಕೆ ಕುರಿತು ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.</p>.<p>ಆರು ವರ್ಷದೊಳಗಿನ ಮಕ್ಕಳ ಬೆಳವಣಿಗೆ ಕಂಠಿತ, ಕಡಿಮೆ ತೂಕದ ಮಕ್ಕಳ ಜನನ, 6 ರಿಂದ 59 ತಿಂಗಳ ಒಳಗಿನ ಮಕ್ಕಳು, 15 ರಿಂದ 49 ವರ್ಷದ ಕಿಶೋರಿ ಅಥವಾ ಮಹಿಳೆಯರಲ್ಲಿ ಉಂಟಾಗುವ ರಕ್ತ ಹೀನತೆಯನ್ನು ತಡೆಗಟ್ಟುವ ಯೋಜನೆಯ ಉದ್ದೇಶ ಸಾಕಾರಕ್ಕೆ ಅಧಿಕಾರಿಗಳು ಶಕ್ತಿಮೀರಿ ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾಯಕರ್ತೆಯರಿಗೆ ಮೊಬೈಲ್ ಹಾಗೂ ಇತರ ಪರಿಕರಗಳನ್ನು ಸರಿಯಾಗಿ ವಿತರಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ 2018-19ರಿಂದ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಈವರೆಗೆ ಸಮುದಾಯ ಆಧಾರಿತ ಅನೇಕ ಚಟುವಟಿಕೆಗಳನ್ನು ಆಯೋಜಿಸಿ ಸುಮಾರು ನಾಲ್ಕು ಲಕ್ಷ ಫಲಾನುಭವಿಗಳಿಗೆ ಪೌಷ್ಟಿಕ ಆಹಾರದ ಕುರಿತು ಅರಿವು ಮೂಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಉಪ ವಿಭಾಗಾಧಿಕಾರಿಗಳಾದ ಭುವನೇಶ ಪಾಟೀಲ, ಗರಿಮಾ ಪನ್ವಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>