ಇತ್ತೀಚೆಗೆ ಭಾಲ್ಕಿಯಲ್ಲಿ ವಕೀಲೆ ಧನಲಕ್ಷ್ಮಿ ಎಂಬುವರ ಮೇಲೆ ತಡರಾತ್ರಿ ಅವರ ಮನೆಗೆ ಹೋಗಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ವಕೀಲರ ಮೇಲೆ ಸತತವಾಗಿ ನಡೆಯುತ್ತಿರುವ ಹಲ್ಲೆ, ಕೊಲೆ ಪ್ರಕರಣಗಳನ್ನು ತಡೆಯಲು ರಾಜ್ಯ ಸರ್ಕಾರವು ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಮಹೇಶಕುಮಾರ ಎಸ್. ಪಾಟೀಲ, ಉಪಾಧ್ಯಕ್ಷೆ ಹೇಮಾ ಎಸ್. ಬಿರಾದಾರ, ಜಂಟಿ ಕಾರ್ಯದರ್ಶಿ ರವಿಕಾಂತ ವಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಪರಮೇಶ್ವರ ಎಂ. ಬಂಬುಳಗೆ, ಖಜಾಂಚಿ ಕೋಮಲ್ ಎಸ್. ಪಾಟೀಲ, ವಕೀಲರಾದ ಅನಿಲಕುಮಾರ ಕರಂಜೆ, ಶಿವಶಂಕರ ಬಿರಾದಾರ, ಸಂಗಮೇಶ ಪಾಟೀಲ, ಹಣಮಂತರಾವ ಸಿಂದೋಲ, ಉಲ್ಲಾಸಿನಿ ಇತರರಿದ್ದರು.