ಟ್ರ್ಯಾಕ್ಟರ್ ಉಳುಮೆ ಬಾಡಿಗೆಯು ದುಬಾರಿಯಾಗಿದ್ದು ಬರದ ಹಿನ್ನೆಲೆ ರೈತರಿಗೆ ಹೆಚ್ಚುವರಿ ಹೊರೆಯಾಗಿದೆ. ಆದರೂ ಕೃಷಿ ಕೆಲಸ ಬಿಡಲಾಗುವುದಿಲ್ಲ. ಈ ಬಾರಿ ಉತ್ತಮ ಮಳೆಯಾದರೆ ಉತ್ತಮ ಬೆಳೆಯು ರೈತರ ಕೈ ಸೇರುತ್ತದೆ.
–ದೇವೇಂದ್ರ ಹಲಿಂಗೆ, ರೈತ ಮುಖಂಡ
ಕೃಷಿ ಸಂಪರ್ಕ ಕೇಂದ್ರದಲ್ಲಿ ಈಗಾಗಲೇ ಹೆಸರು ಉದ್ದು ತೊಗರಿ ಹಾಗೂ ಸೋಯಾ ಅವರೆ ಬಿತ್ತನೆ ಬೀಜ ರಸಗೊಬ್ಬರ ದಾಸ್ತಾನು ಮಾಡಲಾಗುತ್ತಿದೆ. ಜೂನ್ ಮೊದಲ ವಾರದೊಳಗೆ ರೈತರಿಗೆ ವಿತರಿಸಲಾಗುವುದು. ಭೂಮಿಯಲ್ಲಿ ಉತ್ತಮ ತೇವಾಂಶ ಇದ್ದರೆ ಮಾತ್ರ ರೈತರು ಬಿತ್ತನೆ ಕಾರ್ಯ ಆರಂಭಿಸಬೇಕು.
–ಮಾರ್ತಾಂಡ ಮಾಚಕೂರಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ
ಮಳೆ ಇಲ್ಲದೆ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಲ್ಲೂಕಿನ ರೈತರು ಬರದಿಂದ ತತ್ತರಿಸುತ್ತಿದ್ದರೂ ಸರ್ಕಾರ ಕೆಲವೇ ಕೆಲವು ರೈತರಿಗೆ ಮಾತ್ರ ಬರ ಪರಿಹಾರ ಹಣ ನೀಡಿದೆ. ಸರ್ಕಾರ ಎಲ್ಲ ರೈತರಿಗೂ ಪರಿಹಾರ ನೀಡಬೇಕು.
–ಮಲ್ಲಿಕಾರ್ಜುನ್ ಸ್ವಾಮಿ, ಜಿಲ್ಲಾಧ್ಯಕ್ಷ ಕರ್ನಾಟಕ ರಾಜ್ಯ ರೈತ ಸಂಘ ಬೀದರ್
ರೈತರು ಮುಂಗಾರು ಬೆಳೆ ಬಿತ್ತನೆಗೆ ಹೊಲವನ್ನು ಸಜ್ಜುಗೊಳಿಸುತ್ತಿದ್ದಾರೆ.ಗೊಬ್ಬರವನ್ನು ಆಯಾ ಕೃಷಿ ಪತ್ತಿನ ಸಹಕಾರ ಸಂಘದಿಂದ ರಿಯಾಯಿತಿ ದರದಲ್ಲಿ ಒದಗಿಸಲಾಗುತ್ತಿದೆ.