ಕರ್ನಾಟಕ ಆಗ್ರೊ ಟ್ರೇಡರ್ಸ್ ಅಸೋಸಿಯೇಶನ್ ಕರೆಯ ಮೇರೆಗೆ ಬೀದರ್, ಭಾಲ್ಕಿ, ಔರಾದ್, ಬಸವಕಲ್ಯಾಣ, ಹುಮನಾಬಾದ್, ಚಿಟಗುಪ್ಪ, ಹುಲಸೂರು, ಕಮಲನಗರ ತಾಲ್ಲೂಕು ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲೆಡೆ ಬೆಳಿಗ್ಗೆಯಿಂದ ಸಂಜೆ ವರೆಗೆ ಅಂಗಡಿ ಬಂದ್ ಮಾಡಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದರು.