<p><strong>ಔರಾದ್:</strong> ಬೀದರ್ನ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜೂನ್ 15 ರಂದು ನಡೆಯಲಿರುವ ಅಹಿಲ್ಯಾಬಾಯಿ ಹೋಳ್ಕರ್ ಜಯಂತಿ ಕಾರ್ಯಕ್ರಮದ ಭಿತ್ತಿ ಪತ್ರವನ್ನು ಶನಿವಾರ ಪಟ್ಟಣದಲ್ಲಿ ಬಿಡುಗಡೆ ಮಾಡಲಾಯಿತು.</p>.<p>ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಈಶ್ವರಸಿಂಗ್ ಠಾಕೂರ್ ಭಿತ್ತಿಪತ್ರ ಬಿಡುಗಡೆ ಮಾಡಿ, ‘ಬೀದರ್ ನಗರಲ್ಲಿ ಬಹಳ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.</p>.<p>ಅಹಿಲ್ಯಾಬಾಯಿ ಹೋಳ್ಕರ್ ಅವರು ಕಾಶಿ ವಿಶ್ವನಾಥ ದೇವಸ್ಥಾನ ಸೇರಿದಂತೆ 12 ಜ್ಯೋತಿರ್ಲಿಂಗ ದೇವಾಲಯಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಹಿಂದೂ ಧರ್ಮದ ರಕ್ಷಣೆಗೆ ನಿಂತಿದ್ದರು ಎಂದರು. ಗೊಂಡ-ಹಟಕಾರ್ ಸಮುದಾಯದವರು ಒಂದಾಗಿದ್ದು, ಎಲ್ಲ ಸಮಾಜದ ಜನರನ್ನು ಸೇರಿಸಿಕೊಂಡು ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.</p>.<p>‘ಶಿವಯೋಗಿ ಮಚ್ಚೇಂದ್ರನಾಥ ಮಹಾರಾಜರು ಸಾನ್ನಿಧ್ಯ ವಹಿಸಲಿದ್ದಾರೆ. ಹೋಳ್ಕರ್ ವಂಶಸ್ಥರಾದ ಭೂಷಣಸಿಂಗ್ ಹಾಗೂ ಮುಖಂಡ ಕೆ.ಎಸ್ ಈಶ್ವರಪ್ಪ, ಗ್ಯಾರಂಟಿ ಯೋಜನೆಯ ರಾಜಾಧ್ಯಕ್ಷ ಎಚ್.ಎಂ ರೇವಣ್ಣ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>ಉತ್ಸವ ಸಮಿತಿ ಗೌರವಾಧ್ಯಕ್ಷ ಪಂಡಿತರಾವ ಚಿದ್ರಿ ಮಾತನಾಡಿ, ‘ಹೋಳ್ಕರ್ ಜಯಂತಿಯನ್ನು ಹಬ್ಬದಂತೆ ಆಚರಿಸಲು ಎಲ್ಲರೂ ಕೈಜೋಡಿಸಬೇಕು’ ಎಂದರು.</p>.<p>ಉತ್ಸವ ಸಮಿತಿಯ ಕಾರ್ಯದರ್ಶಿ ಮಾಳಪ್ಪ ಅಡಸಾರೆ, ಕಾರ್ಯಾಧ್ಯಕ್ಷ ಬಾಲಾಜಿರಾವ ನಾಯ್ಕ್, ರಾಮ ನರೋಟೆ, ಧೋಂಡಿಬಾ ನರೋಟೆ, ಕೊಂಡಿಬಾರಾವ ಪಾಂಡ್ರೆ, ಸಿದ್ದು ಲೌಟೆ, ಕಿಶನರಾವ ನಾಯ್ಕ್, ಜೆಂಜೇರಾವ, ವೆಂಕಟರಾವ ಡೊಂಬಾಳೆ, ಬಾಲಾಜಿ ಅಮರವಾಡಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ಬೀದರ್ನ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜೂನ್ 15 ರಂದು ನಡೆಯಲಿರುವ ಅಹಿಲ್ಯಾಬಾಯಿ ಹೋಳ್ಕರ್ ಜಯಂತಿ ಕಾರ್ಯಕ್ರಮದ ಭಿತ್ತಿ ಪತ್ರವನ್ನು ಶನಿವಾರ ಪಟ್ಟಣದಲ್ಲಿ ಬಿಡುಗಡೆ ಮಾಡಲಾಯಿತು.</p>.<p>ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಈಶ್ವರಸಿಂಗ್ ಠಾಕೂರ್ ಭಿತ್ತಿಪತ್ರ ಬಿಡುಗಡೆ ಮಾಡಿ, ‘ಬೀದರ್ ನಗರಲ್ಲಿ ಬಹಳ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.</p>.<p>ಅಹಿಲ್ಯಾಬಾಯಿ ಹೋಳ್ಕರ್ ಅವರು ಕಾಶಿ ವಿಶ್ವನಾಥ ದೇವಸ್ಥಾನ ಸೇರಿದಂತೆ 12 ಜ್ಯೋತಿರ್ಲಿಂಗ ದೇವಾಲಯಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಹಿಂದೂ ಧರ್ಮದ ರಕ್ಷಣೆಗೆ ನಿಂತಿದ್ದರು ಎಂದರು. ಗೊಂಡ-ಹಟಕಾರ್ ಸಮುದಾಯದವರು ಒಂದಾಗಿದ್ದು, ಎಲ್ಲ ಸಮಾಜದ ಜನರನ್ನು ಸೇರಿಸಿಕೊಂಡು ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.</p>.<p>‘ಶಿವಯೋಗಿ ಮಚ್ಚೇಂದ್ರನಾಥ ಮಹಾರಾಜರು ಸಾನ್ನಿಧ್ಯ ವಹಿಸಲಿದ್ದಾರೆ. ಹೋಳ್ಕರ್ ವಂಶಸ್ಥರಾದ ಭೂಷಣಸಿಂಗ್ ಹಾಗೂ ಮುಖಂಡ ಕೆ.ಎಸ್ ಈಶ್ವರಪ್ಪ, ಗ್ಯಾರಂಟಿ ಯೋಜನೆಯ ರಾಜಾಧ್ಯಕ್ಷ ಎಚ್.ಎಂ ರೇವಣ್ಣ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>ಉತ್ಸವ ಸಮಿತಿ ಗೌರವಾಧ್ಯಕ್ಷ ಪಂಡಿತರಾವ ಚಿದ್ರಿ ಮಾತನಾಡಿ, ‘ಹೋಳ್ಕರ್ ಜಯಂತಿಯನ್ನು ಹಬ್ಬದಂತೆ ಆಚರಿಸಲು ಎಲ್ಲರೂ ಕೈಜೋಡಿಸಬೇಕು’ ಎಂದರು.</p>.<p>ಉತ್ಸವ ಸಮಿತಿಯ ಕಾರ್ಯದರ್ಶಿ ಮಾಳಪ್ಪ ಅಡಸಾರೆ, ಕಾರ್ಯಾಧ್ಯಕ್ಷ ಬಾಲಾಜಿರಾವ ನಾಯ್ಕ್, ರಾಮ ನರೋಟೆ, ಧೋಂಡಿಬಾ ನರೋಟೆ, ಕೊಂಡಿಬಾರಾವ ಪಾಂಡ್ರೆ, ಸಿದ್ದು ಲೌಟೆ, ಕಿಶನರಾವ ನಾಯ್ಕ್, ಜೆಂಜೇರಾವ, ವೆಂಕಟರಾವ ಡೊಂಬಾಳೆ, ಬಾಲಾಜಿ ಅಮರವಾಡಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>