ಭಾರತೀಯ ಕುಟುಂಬ ಯೋಜನಾ ಸಂಘದ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ನಗರದ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ,‘ಏಡ್ಸ್ ಹೇಗೆ ಹರಡುತ್ತದೆ ಎನ್ನುವುದರ ಕುರಿತು ಯುವಜನತೆ ಮಾಹಿತಿ ಪಡೆಯಬೇಕು’ ಎಂದು ತಿಳಿಸಿದರು. ಸಂಘದ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ಮಾತನಾಡಿ,‘2030ರ ವೇಳೆಗೆ ದೇಶವನ್ನು ಏಡ್ಸ್ ಮುಕ್ತಗೊಳಿಸುವ ಹೊಣೆ ಎಲ್ಲರ ಮೇಲಿದೆ’ ಎಂದು ಹೇಳಿದರು. ಪ್ರಾಚಾರ್ಯ ಡಾ.ಚಂದ್ರಪ್ಪ ಭತಮುರ್ಗೆ, ಸಂಘದ ಕಾರ್ಯಕ್ರಮ ಅಧಿಕಾರಿ ವಿಜಯಲಕ್ಷ್ಮಿ ಹುಡಗೆ ಇದ್ದರು. ಉಪನ್ಯಾಸಕ ವೀರಣ್ಣ ಕೆ. ಸ್ವಾಗತಿಸಿದರು.