ಬಸವಕಲ್ಯಾಣ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿ’ ಎಂದು ಪಕ್ಷದ ಜಿಲ್ಲಾ ಮುಖಂಡ ಪ್ರದೀಪ ವಾತಡೆ ಹೇಳಿದರು.
ತಾಲ್ಲೂಕಿನ ಯದ್ಲಾಪುರದಲ್ಲಿ ಶುಕ್ರವಾರ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಕಾರ್ಯಕರ್ತರ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕೇಂದ್ರದಲ್ಲಿನ ಮೋದಿ ಸರ್ಕಾರ ಹಾಗೂ ರಾಜ್ಯದ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಬಡವರ, ರೈತರ ಪರವಾದ ಯೋಜನೆಗಳನ್ನು ಜಾರಿಗೊಳಿಸಿವೆ. ಕಾಂಗ್ರೆಸ್ ಮುಳುಗುವ ಹಡಗಾಗಿದೆ. ಜೆಡಿಎಸ್ಗೆ ಭವಿಷ್ಯವಿಲ್ಲ. ಆದ್ದರಿಂದ ಪಕ್ಷದ ಜನಪ್ರಿಯತೆ ಎಲ್ಲೆಡೆ ಹೆಚ್ಚುತ್ತಿದ್ದು, ಅನೇಕರು ಈ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ವಿಶೇಷವಾಗಿ ಯುವಕರು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ಬಯಸುತ್ತಿದ್ದಾರೆ’ ಎಂದರು.