‘ಅಬ್ದುಲ್ ಖದೀರ್ ಅವರನ್ನು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ತಡೆದಿರುವುದು ನಿಜ. ಆದರೆ, ಅವರನ್ನು ಬಂಧಿಸಿಲ್ಲ. ಪೊಲೀಸ್ ತನಿಖಾ ತಂಡ ಮುಂಬೈಗೆ ತೆರಳಿದ್ದು, ಪ್ರಾಧಿಕಾರಕ್ಕೆ ದಾಖಲೆಗಳನ್ನು ಪೂರೈಸಿ, ಖದೀರ್ ಅವರಿಂದ ಮುಚ್ಚಳಿಕೆ ಬರೆಯಿಸಿಕೊಂಡು ಬಿಡಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್. ತಿಳಿಸಿದ್ದಾರೆ.