<p><strong>ಬೀದರ್:</strong> ಅಕ್ಕ ಕೆಫೆಯಲ್ಲಿ ಗುಣಮಟ್ಟದ ಆಹಾರ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ , ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಕ್ಕ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಿಸಲು ಅಕ್ಕ ಕೆಫೆ ಸಹಕಾರಿ. ₹12 ಲಕ್ಷ ಸರ್ಕಾರದ ನೆರವು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಬಂಡವಾಳ ಹಾಕಿ ಕೆಫೆ ನಡೆಸಿಕೊಂಡು ಹೋಗಬೇಕು’ ಎಂದರು.</p>.<p>ಬೀದರ್ ದಕ್ಷಿಣ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ಕೆಫೆಯಲ್ಲಿ ವಿಶೇಷ ಹಾಗೂ ವಿವಿಧ ಬಗೆಯ ಭೋಜನ ವ್ಯವಸ್ಥೆ ಮಾಡಬೇಕು. ರಾಷ್ಟ್ರೀಯ ಜೀವನೋಪಾಯ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಶೇ 60 ಹಾಗೂ ರಾಜ್ಯ ಸರ್ಕಾರದಿಂದ ಶೇ 40 ಹಣವನ್ನು ಇದಕ್ಕೆ ನೀಡಲಾಗುತ್ತದೆ’ ಎಂದರು.</p>.<p>ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಬದೋಲೆ ಮಾತನಾಡಿ, ‘ಅಕ್ಕ ಕೆಫೆ ಮೂಲಕ ಮಹಿಳೆಯರನ್ನು ಇನ್ನಷ್ಟು ಆರ್ಥಿಕ ಸದೃಢರಾಗಿಸಲು ಹಾಗೂ ಮಹಿಳಾ ಉದ್ಯಮಶೀಲತೆ ಹೆಚ್ಚಿಸುವುದು ಈ ಕೆಫೆಯ ಮುಖ್ಯ ಉದ್ದೇಶವಾಗಿದೆ. ಎರಡನೇ ಕೆಫೆ ಹುಮನಾಬಾದ್ನಲ್ಲಿ ಆರಂಭದ ಹಂತದಲ್ಲಿದೆ. ಈ ಕಫೆಯಲ್ಲಿ ಆನ್ಲೈನ್ ಯುಪಿಆಯ್ ಮೂಲಕ ಕೂಡ ಪಾವತಿ ಮಾಡಬಹುದಾಗಿದೆ’ ಎಂದರು.</p>.<p>ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್ , ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಶಿವಯ್ಯ ಸ್ವಾಮಿ, ಬೀದರ್ ತಾಲ್ಲೂಕು ಪಂಚಾಯಿತಿ ಇಒ ಮಾಣಿಕರಾವ ಪಾಟೀಲ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಅಕ್ಕ ಕೆಫೆಯಲ್ಲಿ ಗುಣಮಟ್ಟದ ಆಹಾರ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ , ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಕ್ಕ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಿಸಲು ಅಕ್ಕ ಕೆಫೆ ಸಹಕಾರಿ. ₹12 ಲಕ್ಷ ಸರ್ಕಾರದ ನೆರವು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಬಂಡವಾಳ ಹಾಕಿ ಕೆಫೆ ನಡೆಸಿಕೊಂಡು ಹೋಗಬೇಕು’ ಎಂದರು.</p>.<p>ಬೀದರ್ ದಕ್ಷಿಣ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ಕೆಫೆಯಲ್ಲಿ ವಿಶೇಷ ಹಾಗೂ ವಿವಿಧ ಬಗೆಯ ಭೋಜನ ವ್ಯವಸ್ಥೆ ಮಾಡಬೇಕು. ರಾಷ್ಟ್ರೀಯ ಜೀವನೋಪಾಯ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಶೇ 60 ಹಾಗೂ ರಾಜ್ಯ ಸರ್ಕಾರದಿಂದ ಶೇ 40 ಹಣವನ್ನು ಇದಕ್ಕೆ ನೀಡಲಾಗುತ್ತದೆ’ ಎಂದರು.</p>.<p>ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಬದೋಲೆ ಮಾತನಾಡಿ, ‘ಅಕ್ಕ ಕೆಫೆ ಮೂಲಕ ಮಹಿಳೆಯರನ್ನು ಇನ್ನಷ್ಟು ಆರ್ಥಿಕ ಸದೃಢರಾಗಿಸಲು ಹಾಗೂ ಮಹಿಳಾ ಉದ್ಯಮಶೀಲತೆ ಹೆಚ್ಚಿಸುವುದು ಈ ಕೆಫೆಯ ಮುಖ್ಯ ಉದ್ದೇಶವಾಗಿದೆ. ಎರಡನೇ ಕೆಫೆ ಹುಮನಾಬಾದ್ನಲ್ಲಿ ಆರಂಭದ ಹಂತದಲ್ಲಿದೆ. ಈ ಕಫೆಯಲ್ಲಿ ಆನ್ಲೈನ್ ಯುಪಿಆಯ್ ಮೂಲಕ ಕೂಡ ಪಾವತಿ ಮಾಡಬಹುದಾಗಿದೆ’ ಎಂದರು.</p>.<p>ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್ , ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಶಿವಯ್ಯ ಸ್ವಾಮಿ, ಬೀದರ್ ತಾಲ್ಲೂಕು ಪಂಚಾಯಿತಿ ಇಒ ಮಾಣಿಕರಾವ ಪಾಟೀಲ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>