<p><strong>ಭಾಲ್ಕಿ:</strong> ಕನ್ನಡದ ಪ್ರಥಮ ಕವಯತ್ರಿ, 12ನೇ ಶತಮಾನದ ಪ್ರಮುಖ ವಚನಕಾರ್ತಿ ಅಕ್ಕಮಹಾದೇವಿಯವರ ಜೀವನ ಸಂದೇಶಗಳು ಸಾರ್ವತ್ರಿಕ, ಸಾರ್ವಕಾಲಿಕವಾಗಿ ಸಮಾಜಕ್ಕೆ ದಾರಿದೀಪವಾಗಿ ಕಂಗೊಳಿಸುತ್ತಿವೆ ಎಂದು ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವೆ ಸುರೇಖಾ ಹೇಳಿದರು.</p>.<p>ತಾಲ್ಲೂಕಿನ ಹಾಲಹಳ್ಳಿ ಗ್ರಾಮದಲ್ಲಿರುವ ಬೀದರ್ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವೈರಾಗ್ಯನಿಧಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಸವಾದಿ ಶರಣರು ಈ ಜಗತ್ತಿಗೆ ತಮ್ಮ ವಚನಗಳ ಮೂಲಕ ನೀಡಿದ ದಿವ್ಯ ಸಂದೇಶಗಳು ಇಂದಿಗೂ ಅಜರಾಮರವಾಗಿವೆ. ಅಕ್ಕಮಹಾದೇವಿಯಂತಹ ಹೆಣ್ಣು ಮಗಳು ಅಂದಿನ ಅನುಭವ ಮಂಟಪದಲ್ಲಿ ಸ್ವತಂತ್ರವಾಗಿ ಮಾತನಾಡಿದ್ದು, ಅಂದಿನ ಸ್ತ್ರೀ ಸಮಾನತೆಯನ್ನು ಎತ್ತಿಹಿಡಿಯುತ್ತಿತ್ತು. ಸತ್ವಯುತವಾದ ಅಕ್ಕಮಹಾದೇವಿಯವರ ವಚನಗಳು ಇಂದಿಗೂ ನಿತ್ಯನೂತನವಾಗಿವೆ ಎಂದು ತಿಳಿಸಿದರು.</p>.<p>ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ರವೀಂದ್ರನಾಥ.ವಿ.ಗಬಾಡಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ಕನ್ನಡದ ಪ್ರಥಮ ಕವಯತ್ರಿ, 12ನೇ ಶತಮಾನದ ಪ್ರಮುಖ ವಚನಕಾರ್ತಿ ಅಕ್ಕಮಹಾದೇವಿಯವರ ಜೀವನ ಸಂದೇಶಗಳು ಸಾರ್ವತ್ರಿಕ, ಸಾರ್ವಕಾಲಿಕವಾಗಿ ಸಮಾಜಕ್ಕೆ ದಾರಿದೀಪವಾಗಿ ಕಂಗೊಳಿಸುತ್ತಿವೆ ಎಂದು ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವೆ ಸುರೇಖಾ ಹೇಳಿದರು.</p>.<p>ತಾಲ್ಲೂಕಿನ ಹಾಲಹಳ್ಳಿ ಗ್ರಾಮದಲ್ಲಿರುವ ಬೀದರ್ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವೈರಾಗ್ಯನಿಧಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಸವಾದಿ ಶರಣರು ಈ ಜಗತ್ತಿಗೆ ತಮ್ಮ ವಚನಗಳ ಮೂಲಕ ನೀಡಿದ ದಿವ್ಯ ಸಂದೇಶಗಳು ಇಂದಿಗೂ ಅಜರಾಮರವಾಗಿವೆ. ಅಕ್ಕಮಹಾದೇವಿಯಂತಹ ಹೆಣ್ಣು ಮಗಳು ಅಂದಿನ ಅನುಭವ ಮಂಟಪದಲ್ಲಿ ಸ್ವತಂತ್ರವಾಗಿ ಮಾತನಾಡಿದ್ದು, ಅಂದಿನ ಸ್ತ್ರೀ ಸಮಾನತೆಯನ್ನು ಎತ್ತಿಹಿಡಿಯುತ್ತಿತ್ತು. ಸತ್ವಯುತವಾದ ಅಕ್ಕಮಹಾದೇವಿಯವರ ವಚನಗಳು ಇಂದಿಗೂ ನಿತ್ಯನೂತನವಾಗಿವೆ ಎಂದು ತಿಳಿಸಿದರು.</p>.<p>ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ರವೀಂದ್ರನಾಥ.ವಿ.ಗಬಾಡಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>