<p><strong>ಬೀದರ್:</strong> ‘ಜಿಲ್ಲೆಯನ್ನು ಆನೆಕಾಲು ರೋಗಮುಕ್ತಗೊಳಿಸಲು ಪ್ರತಿಯೊಬ್ಬರು ತಪ್ಪದೆ ಡಿಇಸಿ ಹಾಗೂ ಅಲ್ಬೆಂಡಾಜೋಲ್ ಮಾತ್ರೆ ಸೇವಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಹೇಳಿದರು.</p>.<p>ನಗರದ ಸರ್ಕಾರಿ ನರ್ಸಿಂಗ್ ಸ್ಕೂಲ್ನಲ್ಲಿ ಸೋಮವಾರ ಸ್ವತಃ ಮಾತ್ರೆ ಸೇವಿಸಿ ಆನೆಕಾಲು ನಿರ್ಮೂಲನೆಗಾಗಿ ಹೆಚ್ಚುವರಿ ಸುತ್ತಿನ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈವರೆಗೆ ನಡೆದ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಔಷಧಿ ಸೇವಿಸದೆ ಇರುವುದು ಬೇಸರದ ಸಂಗತಿಯಾಗಿದೆ’ ಎಂದು ತಿಳಿಸಿದರು.<br />‘ಈ ಬಾರಿಯ ಕಾರ್ಯಕ್ರಮದಲ್ಲಿ ಅರ್ಹರು ತರಬೇತಿ ಹೊಂದಿದ ಸಿಬ್ಬಂದಿಯ ಸಮ್ಮುಖದಲ್ಲೇ ಮಾತ್ರೆಗಳನ್ನು ನುಂಗಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಶಕ್ತಿಮೀರಿ ಪ್ರಯತ್ನಿಸಬೇಕು’ ಎಂದು ಹೇಳಿದರು.</p>.<p>ಸಂಸದ ಭಗವಂತ ಖೂಬಾ ಮಾತನಾಡಿ, ‘5 ರಿಂದ 7 ಸುತ್ತಿನ ಡಿಇಸಿ ಹಾಗೂ ಅಲ್ಬೆಂಡಾಜೋಲ್ ಮಾತ್ರೆ ಸಾಮೂಹಿಕ ಸೇವನೆ ಕಾರ್ಯಕ್ರಮದ ಮೂಲಕ ಆನೆಕಾಲು ರೋಗ ನಿರ್ಮೂಲನೆ ಮಾಡಬಹುದಾಗಿದೆ. ಆದರೆ, ಜಿಲ್ಲೆಯಲ್ಲಿ 14 ಸುತ್ತಿನ ಕಾರ್ಯಕ್ರಮ ನಡೆದರೂ ಗುರಿ ಸಾಧನೆಯಾಗಿಲ್ಲ’ ಎಂದು ಸಂಸದ ಭಗವಂತ ಖೂಬಾ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಉಡುಪಿ, ಮಂಗಳೂರು, ಕಾರವಾರ ಮಾದರಿಯಲ್ಲಿ ಜಿಲ್ಲೆಯಲ್ಲಿ ಆನೆಕಾಲು ರೋಗ ಹರಡುವಿಕೆಯನ್ನು ತಡೆಗಟ್ಟಲು ಎಲ್ಲರೂ ಕಡ್ಡಾಯವಾಗಿ ಊಟದ ನಂತರ ಡಿಇಸಿ ಹಾಗೂ ಅಲ್ಬೆಂಡಾಜೋಲ್ ಮಾತ್ರೆ ಸೇವಿಸಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ನೋಡಲ್ ಅಧಿಕಾರಿ ಡಾ. ಪ್ರೇಮಾನಂದ, ‘ಜಿಲ್ಲೆಯಲ್ಲಿ ಹೆಚ್ಚುವರಿ ಸುತ್ತಿನ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮದ ಮುಂಚೆಯ ಹಾಗೂ ನಂತರದ ಬೆಳವಣಿಗೆಗಳ ಸಂಪೂರ್ಣ ವಿವರ ಕಲೆ ಹಾಕಿ ಜಿಲ್ಲೆಯನ್ನು ಆನೆಕಾಲು ರೋಗ ಮುಕ್ತವಾಗಿಸುವ ದಿಸೆಯಲ್ಲಿ ಜಿಲ್ಲಾಡಳಿತಕ್ಕೆ ಮಾರ್ಗೋಪಾಯಗಳನ್ನು ನೀಡಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ. ಜಬ್ಬಾರ್, ‘ಜಿಲ್ಲೆಯಲ್ಲಿ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮ ಅಕ್ಟೋಬರ್ 6 ರ ವರೆಗೆ ನಡೆಯಲಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶೇ 100 ರಷ್ಟು ಗುರಿ ಸಾಧಿಸಲು ಶ್ರಮಿಸಬೇಕು’ ಎಂದು ಹೇಳಿದರು.</p>.<p>‘ಔಷಧಿ ಸೇವನೆಯ ನಂತರ ಉಂಟಾಗುವ ಸೌಮ್ಯ ರೀತಿಯ ವ್ಯತಿರಿಕ್ತ ಪರಿಣಾಮಗಳನ್ನು ಎದುರಿಸಲು ಜಿಲ್ಲೆಯಲ್ಲಿ 62 ತಂಡಗಳನ್ನು ರಚಿಸಲಾಗಿದೆ’ ಎಂದು ಹೇಳಿದರು.</p>.<p>ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ ಮಾತನಾಡಿದರು. ಡಾ. ಅನೀಲಕುಮಾರ ಚಿಂತಾಮಣಿ, ಡಾ. ಸಿ.ಎಸ್.ರಗಟೆ, ಡಾ. ಸಂಜೀವಕುಮಾರ ಪಾಟೀಲ, ಡಾ.ಮಾರ್ಥಂಡರಾವ್ ಕಾಶೆಂಪೂರಕರ್, ಜಾನೆಟ್ ಮೆನಿಜಿಸ್, ಸುಭಾಷ ಮುಧಾಳೆ, ಶಾಂತಪ್ಪ ಸುಂದರಕರ್, ಮಲ್ಲಿಕಾರ್ಜುನ ಸದಾಶಿವ, ರಾಜು ಕುಲರ್ಣಿ, ಮಹೆಬೂಬಮಿಯಾ, ಓಂಕಾರ ಮಲ್ಲಿಗೆ ಇದ್ದರು.</p>.<p>ಪ್ರಾಚಾರ್ಯ ರಾಜಕುಮಾರ ಮಾಳಗೆ ಸ್ವಾಗತಿಸಿದರು. ಪ್ರಕಾಶ ಬಿ.ಎಂ. ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಜಿಲ್ಲೆಯನ್ನು ಆನೆಕಾಲು ರೋಗಮುಕ್ತಗೊಳಿಸಲು ಪ್ರತಿಯೊಬ್ಬರು ತಪ್ಪದೆ ಡಿಇಸಿ ಹಾಗೂ ಅಲ್ಬೆಂಡಾಜೋಲ್ ಮಾತ್ರೆ ಸೇವಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಹೇಳಿದರು.</p>.<p>ನಗರದ ಸರ್ಕಾರಿ ನರ್ಸಿಂಗ್ ಸ್ಕೂಲ್ನಲ್ಲಿ ಸೋಮವಾರ ಸ್ವತಃ ಮಾತ್ರೆ ಸೇವಿಸಿ ಆನೆಕಾಲು ನಿರ್ಮೂಲನೆಗಾಗಿ ಹೆಚ್ಚುವರಿ ಸುತ್ತಿನ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈವರೆಗೆ ನಡೆದ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಔಷಧಿ ಸೇವಿಸದೆ ಇರುವುದು ಬೇಸರದ ಸಂಗತಿಯಾಗಿದೆ’ ಎಂದು ತಿಳಿಸಿದರು.<br />‘ಈ ಬಾರಿಯ ಕಾರ್ಯಕ್ರಮದಲ್ಲಿ ಅರ್ಹರು ತರಬೇತಿ ಹೊಂದಿದ ಸಿಬ್ಬಂದಿಯ ಸಮ್ಮುಖದಲ್ಲೇ ಮಾತ್ರೆಗಳನ್ನು ನುಂಗಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಶಕ್ತಿಮೀರಿ ಪ್ರಯತ್ನಿಸಬೇಕು’ ಎಂದು ಹೇಳಿದರು.</p>.<p>ಸಂಸದ ಭಗವಂತ ಖೂಬಾ ಮಾತನಾಡಿ, ‘5 ರಿಂದ 7 ಸುತ್ತಿನ ಡಿಇಸಿ ಹಾಗೂ ಅಲ್ಬೆಂಡಾಜೋಲ್ ಮಾತ್ರೆ ಸಾಮೂಹಿಕ ಸೇವನೆ ಕಾರ್ಯಕ್ರಮದ ಮೂಲಕ ಆನೆಕಾಲು ರೋಗ ನಿರ್ಮೂಲನೆ ಮಾಡಬಹುದಾಗಿದೆ. ಆದರೆ, ಜಿಲ್ಲೆಯಲ್ಲಿ 14 ಸುತ್ತಿನ ಕಾರ್ಯಕ್ರಮ ನಡೆದರೂ ಗುರಿ ಸಾಧನೆಯಾಗಿಲ್ಲ’ ಎಂದು ಸಂಸದ ಭಗವಂತ ಖೂಬಾ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಉಡುಪಿ, ಮಂಗಳೂರು, ಕಾರವಾರ ಮಾದರಿಯಲ್ಲಿ ಜಿಲ್ಲೆಯಲ್ಲಿ ಆನೆಕಾಲು ರೋಗ ಹರಡುವಿಕೆಯನ್ನು ತಡೆಗಟ್ಟಲು ಎಲ್ಲರೂ ಕಡ್ಡಾಯವಾಗಿ ಊಟದ ನಂತರ ಡಿಇಸಿ ಹಾಗೂ ಅಲ್ಬೆಂಡಾಜೋಲ್ ಮಾತ್ರೆ ಸೇವಿಸಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ನೋಡಲ್ ಅಧಿಕಾರಿ ಡಾ. ಪ್ರೇಮಾನಂದ, ‘ಜಿಲ್ಲೆಯಲ್ಲಿ ಹೆಚ್ಚುವರಿ ಸುತ್ತಿನ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮದ ಮುಂಚೆಯ ಹಾಗೂ ನಂತರದ ಬೆಳವಣಿಗೆಗಳ ಸಂಪೂರ್ಣ ವಿವರ ಕಲೆ ಹಾಕಿ ಜಿಲ್ಲೆಯನ್ನು ಆನೆಕಾಲು ರೋಗ ಮುಕ್ತವಾಗಿಸುವ ದಿಸೆಯಲ್ಲಿ ಜಿಲ್ಲಾಡಳಿತಕ್ಕೆ ಮಾರ್ಗೋಪಾಯಗಳನ್ನು ನೀಡಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ. ಜಬ್ಬಾರ್, ‘ಜಿಲ್ಲೆಯಲ್ಲಿ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮ ಅಕ್ಟೋಬರ್ 6 ರ ವರೆಗೆ ನಡೆಯಲಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶೇ 100 ರಷ್ಟು ಗುರಿ ಸಾಧಿಸಲು ಶ್ರಮಿಸಬೇಕು’ ಎಂದು ಹೇಳಿದರು.</p>.<p>‘ಔಷಧಿ ಸೇವನೆಯ ನಂತರ ಉಂಟಾಗುವ ಸೌಮ್ಯ ರೀತಿಯ ವ್ಯತಿರಿಕ್ತ ಪರಿಣಾಮಗಳನ್ನು ಎದುರಿಸಲು ಜಿಲ್ಲೆಯಲ್ಲಿ 62 ತಂಡಗಳನ್ನು ರಚಿಸಲಾಗಿದೆ’ ಎಂದು ಹೇಳಿದರು.</p>.<p>ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ ಮಾತನಾಡಿದರು. ಡಾ. ಅನೀಲಕುಮಾರ ಚಿಂತಾಮಣಿ, ಡಾ. ಸಿ.ಎಸ್.ರಗಟೆ, ಡಾ. ಸಂಜೀವಕುಮಾರ ಪಾಟೀಲ, ಡಾ.ಮಾರ್ಥಂಡರಾವ್ ಕಾಶೆಂಪೂರಕರ್, ಜಾನೆಟ್ ಮೆನಿಜಿಸ್, ಸುಭಾಷ ಮುಧಾಳೆ, ಶಾಂತಪ್ಪ ಸುಂದರಕರ್, ಮಲ್ಲಿಕಾರ್ಜುನ ಸದಾಶಿವ, ರಾಜು ಕುಲರ್ಣಿ, ಮಹೆಬೂಬಮಿಯಾ, ಓಂಕಾರ ಮಲ್ಲಿಗೆ ಇದ್ದರು.</p>.<p>ಪ್ರಾಚಾರ್ಯ ರಾಜಕುಮಾರ ಮಾಳಗೆ ಸ್ವಾಗತಿಸಿದರು. ಪ್ರಕಾಶ ಬಿ.ಎಂ. ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>