ಅಲೆಮಾರಿಗಳಿಗೆ ವಸತಿ ಸೇರಿದಂತೆ ಮೂಲಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಸತತ ನಾಲ್ಕು ತಿಂಗಳಿಂದ ಹೋರಾಟ ನಡೆಸಲಾಗುತ್ತಿದೆ. ಆದರೆ, ಜಿಲ್ಲಾಡಳಿತ ಕಿವಿಗೊಟ್ಟಿಲ್ಲ. ಈ ಸಲ ಹೋರಾಟ ತಾರ್ಕಿಕ ಅಂತ್ಯ ಕಾಣುವವರೆಗೆ ಮುಂದುವರೆಸಲಾಗುವುದು ಎಂದು ಪಟ್ಟು ಹಿಡಿದು ಧರಣಿ ನಡೆಸುತ್ತಿದ್ದರು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಗುರುವಾರ ಧರಣಿ ಸ್ಥಳಕ್ಕೆ ಭೇಟಿ ನೀಡಿದರು.