<p><strong>ಬೀದರ್:</strong> ಕೋವಿಡ್ 19 ಸೋಂಕಿನ ಪ್ರಯುಕ್ತ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸಹಾಯ ಧನ ಬಿಡುಗಡೆ ಮಾಡುವಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಆರೋಪಿಸಿದೆ.</p>.<p>ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.</p>.<p>ಕೋವಿಡ್ 19 ಸೋಂಕಿನ ಕಾರಣ ರಾಜ್ಯ ಸರ್ಕಾರ ಕೊಡುತ್ತಿರುವ ₹ 5 ಸಾವಿರ ಸಹಾಯ ಧನ ಕೆಲವರಿಗೆ ಬಿಡುಗಡೆಯಾದರೆ, ಇನ್ನು ಕೆಲವರಿಗೆ ಬಿಡುಗಡೆಯಾಗಿಲ್ಲ ಎಂದು ದೂರಿದರು.</p>.<p>ಒಂದು ವರ್ಷ ಹಾಗೂ ಒಂದು ವರ್ಷದ ಒಳಗೆ ಹೆಸರು ನೋಂದಾಯಿಸಿಕೊಂಡ ಕಾರ್ಮಿಕರಿಗೆ ಸಹಾಯಧನ ತಲುಪಿದೆ. ಹಳೆಬರಿಗೆ ದೊರಕಿಲ್ಲ. ಸಹಾಯಧನ ಬಿಡುಗಡೆಯಾದವರಲ್ಲಿಯೂ ಅರ್ಧದಷ್ಟು ಮಂದಿ ನಿಜವಾದ ಕಾರ್ಮಿಕರಲ್ಲ ಎಂದು ಆರೋಪಿಸಿದರು.</p>.<p>ಆಗಿರುವ ಲೋಪವನ್ನು ಕೂಡಲೇ ಸರಿಪಡಿಸಬೇಕು. 2007 ರಿಂದ ಹೆಸರು ನೋಂದಾಯಿಸಿಕೊಂಡವರಿಗೆ ಸಹಾಯಧನ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಸಂಘದ ಅಧ್ಯಕ್ಷ ಬಾಬುರಾವ್ ಹೊನ್ನಾ, ಎಐಟಿಐ ಜಿಲ್ಲಾ ಪ್ರಭಾರಿ ಅಲಿ ಅಹಮ್ಮದ್ ಖಾನ್, ನಜೀರ್ ಅಹಮ್ಮದ್, ಗುರುಪಾದಯ್ಯ ಸ್ವಾಮಿ, ಚಂದ್ರಭಾನ, ಪ್ರಭು ತಗಣಿಕರ್, ಪಪ್ಪುರಾಜ ಮೇತ್ರೆ, ಎಂ.ಡಿ. ಶಫಾಯತ್ ಅಲಿ, ಮುನಿರೊದ್ದಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕೋವಿಡ್ 19 ಸೋಂಕಿನ ಪ್ರಯುಕ್ತ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸಹಾಯ ಧನ ಬಿಡುಗಡೆ ಮಾಡುವಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಆರೋಪಿಸಿದೆ.</p>.<p>ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.</p>.<p>ಕೋವಿಡ್ 19 ಸೋಂಕಿನ ಕಾರಣ ರಾಜ್ಯ ಸರ್ಕಾರ ಕೊಡುತ್ತಿರುವ ₹ 5 ಸಾವಿರ ಸಹಾಯ ಧನ ಕೆಲವರಿಗೆ ಬಿಡುಗಡೆಯಾದರೆ, ಇನ್ನು ಕೆಲವರಿಗೆ ಬಿಡುಗಡೆಯಾಗಿಲ್ಲ ಎಂದು ದೂರಿದರು.</p>.<p>ಒಂದು ವರ್ಷ ಹಾಗೂ ಒಂದು ವರ್ಷದ ಒಳಗೆ ಹೆಸರು ನೋಂದಾಯಿಸಿಕೊಂಡ ಕಾರ್ಮಿಕರಿಗೆ ಸಹಾಯಧನ ತಲುಪಿದೆ. ಹಳೆಬರಿಗೆ ದೊರಕಿಲ್ಲ. ಸಹಾಯಧನ ಬಿಡುಗಡೆಯಾದವರಲ್ಲಿಯೂ ಅರ್ಧದಷ್ಟು ಮಂದಿ ನಿಜವಾದ ಕಾರ್ಮಿಕರಲ್ಲ ಎಂದು ಆರೋಪಿಸಿದರು.</p>.<p>ಆಗಿರುವ ಲೋಪವನ್ನು ಕೂಡಲೇ ಸರಿಪಡಿಸಬೇಕು. 2007 ರಿಂದ ಹೆಸರು ನೋಂದಾಯಿಸಿಕೊಂಡವರಿಗೆ ಸಹಾಯಧನ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಸಂಘದ ಅಧ್ಯಕ್ಷ ಬಾಬುರಾವ್ ಹೊನ್ನಾ, ಎಐಟಿಐ ಜಿಲ್ಲಾ ಪ್ರಭಾರಿ ಅಲಿ ಅಹಮ್ಮದ್ ಖಾನ್, ನಜೀರ್ ಅಹಮ್ಮದ್, ಗುರುಪಾದಯ್ಯ ಸ್ವಾಮಿ, ಚಂದ್ರಭಾನ, ಪ್ರಭು ತಗಣಿಕರ್, ಪಪ್ಪುರಾಜ ಮೇತ್ರೆ, ಎಂ.ಡಿ. ಶಫಾಯತ್ ಅಲಿ, ಮುನಿರೊದ್ದಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>