ಬಸವಕಲ್ಯಾಣ: ಹುಲಸೂರ ತಾಲ್ಲೂಕಿನ ಗಡಿಗೌಡಗಾಂವದಲ್ಲಿ ಧಾರ್ಮಿಕ ಮುಖಂಡರೊಬ್ಬರು ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಸುದ್ದಿ ಹರಡಿದ್ದರಿಂದ ಗ್ರಾಮದಲ್ಲಿ ಭಾನುವಾರ ಅಶಾಂತಿ ವಾತಾವರಣ ನಿರ್ಮಾಣವಾಗಿತ್ತು.
ಇದರ ಬಗ್ಗೆ ಗ್ರಾಮದಲ್ಲಿ ಸಭೆ ನಡೆಯಿತು. ದುರ್ವರ್ತನೆ ನಡೆಸಿರುವವರು ಊರಲ್ಲಿ ಇರಬಾರದು ಎಂಬ ಒಮ್ಮತದ ಅಭಿಪ್ರಾಯ ಕೈಗೊಳ್ಳಲಾಯಿತು. ಆರೋಪ ಹೊತ್ತಿರುವವರು ಊರಿನಿಂದ ಹೊರ ಹೋಗಿದ್ದಾರೆ ಎನ್ನಲಾಗುತ್ತಿದೆ.
ಜಿಲ್ಲೆಯ ಇಬ್ಬರು ಪ್ರಭಾವಿ ಧಾರ್ಮಿಕ ಮುಖಂಡರು ಸ್ಥಳಕ್ಕೆ ಬಂದು ಸಂಧಾನ ನಡೆಸಿದರಾದರೂ ಪ್ರಯೋಜನ ಆಗಲಿಲ್ಲ ಎಂದೂ ತಿಳಿದು ಬಂದಿದೆ.
ಗಡಿಗೌಡಗಾಂವ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ಇರುವ ಕಾರಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.