<p><strong>ಔರಾದ್</strong>: ತಾಲ್ಲೂಕಿನ ಕೌಠಾ(ಕೆ)-ವಡಗಾಂವ್ ಮುಖ್ಯ ರಸ್ತೆಯಲ್ಲಿ ಬರುವ ಆಲೂರ(ಕೆ) ಬಳಿ ಸೇತುವೆ ತಡೆಗೋಡೆ ಭಾಗಶಃ ಹಾನಿಗೊಳಗಾಗಿದ್ದು, ಪ್ರಯಾಣಿಕರಲ್ಲಿ ಆತಂಕ ಆವರಿಸಿದೆ.</p>.<p>ತಡೆಗೋಡೆ ಎರಡೂ ಭಾಗದ ಕಂಬಗಳು ಕಿತ್ತು ಹೋಗಿವೆ. ಇದರಿಂದ ರಸ್ತೆ ಬದಿ ಹೋಗುವ ಬೈಕ್ ಸವಾರರು ಹಾಗೂ ಪಾದಚಾರಿಗಳಲ್ಲಿ ಆತಂಕ ಮನೆ ಮಾಡಿದೆ. ಕಳೆದ ತಿಂಗಳು ಇಲ್ಲಿ ಎರಡು ಆಕಳು ಬಿದ್ದಿದ್ದು, ಜನ ಅವುಗಳ ರಕ್ಷಣೆ ಮಾಡಿದ್ದಾರೆ ಎಂದು ಸ್ಥಳೀಯರು ಹೇಳುತ್ತಾರೆ.</p>.<p>ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೌಠಾ(ಕೆ)-ವಡಗಾಂವ್ ನಡುವಿನ 12 ಕಿ.ಮೀ. ಹಾಳಾದ ರಸ್ತೆ ಹಾಗೂ ತಡೆಗೋಡೆ ರಿಪೇರಿ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಭಾಗದಲ್ಲಿ ಓಡಾಡುವ ಅನೇಕ ಗ್ರಾಮಗಳ ಜನರು ತೊಂದರೆ ಎದುರಿಸುತ್ತಿದ್ದಾರೆ. ಎರಡು ವರ್ಷಗಳಿಂದ ರಸ್ತೆ ಮೇಲೆ ಗುಂಡಿಗಳು ಬಿದ್ದರೂ, ಕನಿಷ್ಠ ಮುಚ್ಚುವ ಕೆಲಸ ಮಾಡುತ್ತಿಲ್ಲ ಎಂದು ಸ್ಥಳೀಯ ಯುವಕ ಸಂಜುಕುಮಾರ ಬೇಲೂರ ಅಸಮಾಧಾನ ಹೊರ ಹಾಕಿದ್ದಾರೆ.</p>.<p>‘ನಾವು ಸಮಸ್ಯೆ ಹೇಳಿಕೊಳ್ಳಲು ಲೋಕೋಪಯೋಗಿ ಕಚೇರಿಗೆ ಹೋದರೆ ಅಲ್ಲಿ ಅಧಿಕಾರಿಗಳು ಇರುವುದಿಲ್ಲ. ಇನ್ನು ಕರೆ ಮಾಡಿದರೂ ಸ್ವೀಕರಿಸುವುದಿಲ್ಲ. ಹೀಗಾಗಿ ಅವರ ವಿರುದ್ಧ ನಾವು ಹೋರಾಟ ಮಾಡಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.</p>.<p>ಕೌಠಾದಿಂದ ವಡಗಾಂವ್ ರಸ್ತೆ ತೆಲಂಗಾಣಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಅದರ ವ್ಯಾಪ್ತಿಯಲ್ಲಿ ಹತ್ತಾರು ಗ್ರಾಮಗಳು ಬರುತ್ತವೆ. ಈ ಊರಿನ ವಿದ್ಯಾರ್ಥಿಗಳು ಶಾಲೆ ಕಾಲೇಜಿಗೆ ಹೋಗಿ ಬರಲು ತುಂಬಾ ಸಮಸ್ಯೆಯಾಗಿದೆ. ಹೀಗಾಗಿ ತಕ್ಷಣ ಗುಂಡಿ ಮುಚ್ಚುವ ಕೆಲಸ ಮಾಡುವಂತೆ ಆಲೂರ, ಬೇಲೂರ, ಪಾಶಾಪೂರ ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ತಾಲ್ಲೂಕಿನ ಕೌಠಾ(ಕೆ)-ವಡಗಾಂವ್ ಮುಖ್ಯ ರಸ್ತೆಯಲ್ಲಿ ಬರುವ ಆಲೂರ(ಕೆ) ಬಳಿ ಸೇತುವೆ ತಡೆಗೋಡೆ ಭಾಗಶಃ ಹಾನಿಗೊಳಗಾಗಿದ್ದು, ಪ್ರಯಾಣಿಕರಲ್ಲಿ ಆತಂಕ ಆವರಿಸಿದೆ.</p>.<p>ತಡೆಗೋಡೆ ಎರಡೂ ಭಾಗದ ಕಂಬಗಳು ಕಿತ್ತು ಹೋಗಿವೆ. ಇದರಿಂದ ರಸ್ತೆ ಬದಿ ಹೋಗುವ ಬೈಕ್ ಸವಾರರು ಹಾಗೂ ಪಾದಚಾರಿಗಳಲ್ಲಿ ಆತಂಕ ಮನೆ ಮಾಡಿದೆ. ಕಳೆದ ತಿಂಗಳು ಇಲ್ಲಿ ಎರಡು ಆಕಳು ಬಿದ್ದಿದ್ದು, ಜನ ಅವುಗಳ ರಕ್ಷಣೆ ಮಾಡಿದ್ದಾರೆ ಎಂದು ಸ್ಥಳೀಯರು ಹೇಳುತ್ತಾರೆ.</p>.<p>ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೌಠಾ(ಕೆ)-ವಡಗಾಂವ್ ನಡುವಿನ 12 ಕಿ.ಮೀ. ಹಾಳಾದ ರಸ್ತೆ ಹಾಗೂ ತಡೆಗೋಡೆ ರಿಪೇರಿ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಭಾಗದಲ್ಲಿ ಓಡಾಡುವ ಅನೇಕ ಗ್ರಾಮಗಳ ಜನರು ತೊಂದರೆ ಎದುರಿಸುತ್ತಿದ್ದಾರೆ. ಎರಡು ವರ್ಷಗಳಿಂದ ರಸ್ತೆ ಮೇಲೆ ಗುಂಡಿಗಳು ಬಿದ್ದರೂ, ಕನಿಷ್ಠ ಮುಚ್ಚುವ ಕೆಲಸ ಮಾಡುತ್ತಿಲ್ಲ ಎಂದು ಸ್ಥಳೀಯ ಯುವಕ ಸಂಜುಕುಮಾರ ಬೇಲೂರ ಅಸಮಾಧಾನ ಹೊರ ಹಾಕಿದ್ದಾರೆ.</p>.<p>‘ನಾವು ಸಮಸ್ಯೆ ಹೇಳಿಕೊಳ್ಳಲು ಲೋಕೋಪಯೋಗಿ ಕಚೇರಿಗೆ ಹೋದರೆ ಅಲ್ಲಿ ಅಧಿಕಾರಿಗಳು ಇರುವುದಿಲ್ಲ. ಇನ್ನು ಕರೆ ಮಾಡಿದರೂ ಸ್ವೀಕರಿಸುವುದಿಲ್ಲ. ಹೀಗಾಗಿ ಅವರ ವಿರುದ್ಧ ನಾವು ಹೋರಾಟ ಮಾಡಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.</p>.<p>ಕೌಠಾದಿಂದ ವಡಗಾಂವ್ ರಸ್ತೆ ತೆಲಂಗಾಣಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಅದರ ವ್ಯಾಪ್ತಿಯಲ್ಲಿ ಹತ್ತಾರು ಗ್ರಾಮಗಳು ಬರುತ್ತವೆ. ಈ ಊರಿನ ವಿದ್ಯಾರ್ಥಿಗಳು ಶಾಲೆ ಕಾಲೇಜಿಗೆ ಹೋಗಿ ಬರಲು ತುಂಬಾ ಸಮಸ್ಯೆಯಾಗಿದೆ. ಹೀಗಾಗಿ ತಕ್ಷಣ ಗುಂಡಿ ಮುಚ್ಚುವ ಕೆಲಸ ಮಾಡುವಂತೆ ಆಲೂರ, ಬೇಲೂರ, ಪಾಶಾಪೂರ ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>