<p><strong>ಔರಾದ್: </strong>ಭಕ್ತರ ಹರ್ಷೋದ್ಘಾರ ಹಾಗೂ ಜಯಘೋಷಗಳ ನಡುವೆ ಶನಿವಾರ ಬೆಳಗಿನ ಜಾವ ಇಲ್ಲಿಯ ಅಮರೇಶ್ವರ ರಥೋತ್ಸವ ಜರುಗಿತು.</p>.<p>ವೈವಿದ್ಯಮಯ ಹೂ ಮತ್ತು ದೀಪಗಳಿಂದ ಅಲಂಕರಿಸಲಾದ ರಥ ಅಮರೇಶ್ವರ ದೇವಸ್ಥಾನ ಆವರಣದಿಂದ ಹೊರಡುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ‘ಓಂ ಭಲಾ, ಶಂಕರ ಭಲಾ’ ಎಂಬ ಜಯಘೋಷ ಎಲ್ಲೆಡೆ ಮೊಳಗಿತ್ತು. ಭಕ್ತರು ಈ ಸುಂದರ ದೃಶ್ಯ ಕಣ್ಮುಂಬಿಕೊಂಡು ಭಕ್ತಿಭಾವ ಮೆರೆದರು.</p>.<p>ರಸ್ತೆಯ ಎರಡೂ ಬದಿಯಲ್ಲಿ ನಿಂತ ಭಕ್ತರು ರಥೋತ್ಸವವನ್ನು ಸ್ವಾಗತಿಸಿದರು. ಕೈಜೋಡಿಸಿ ಅಮರೇಶ್ವರನಿಗೆ ನಮಿಸಿದರು. ಕೆಲವರು ಶಲ್ಯ ತೊಡಿಸಿ, ಕಾಯಿ ಒಡೆದು ತಮ್ಮ ಇಷ್ಟಾರ್ಥ ಪೂರೈಸಿದರು.</p>.<p>ರಥ ಹೋಗುವ ದಾರಿಯುದ್ದಕ್ಕೂ ರಂಗೋಲಿ ಹಾಕಿ ವಿವಿಧ ಬಣ್ಣದ ಹೂ ಹಾಸಲಾಗಿತ್ತು. ಸ್ಥಳೀಯ ಕಲಾವಿದರ ನೃತ್ಯ, ಯುವಕರ ಕೋಲಾಟ, ಡೊಳ್ಳು ಕುಣಿತ ಮೆರವಣಿಗೆ ಕಳೆ ಕಟ್ಟಿತ್ತು. ಜಾತ್ರೆಗೆ ಆಗಮಿಸಿದ ಭಕ್ತರು ಹುಗ್ಗಿ ಪ್ರಸಾದ ಸವಿದು ಸಂಭ್ರಮಿಸಿದರು.</p>.<p>ಅಮರೇಶ್ವರ ದೇವಸ್ಥಾನದಲ್ಲಿ ತಾಲ್ಲೂಕಿನ ವಿವಿಧೆಡೆಯಿಂದ ಆಗಮಿಸಿದ ಕಲಾವಿದರು ಭಜನೆ ಕೀರ್ತನೆ ನಡೆಸಿಕೊಟ್ಟರು.</p>.<p>ರಾತ್ರಿ ಸಂಸದ ಭಗವಂತ ಖೂಬಾ ರಥೋತ್ಸವಕ್ಕೆ ಪೂಜೆ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಬೆಳಿಗ್ಗೆ ಆಗಮಿಸಿ ಅಮರೇಶ್ವರನಿಗೆ ನಮಿಸಿದರು. ಧುರೀಣ ಬಸವರಾಜ ದೇಶಮುಖ, ಶರಣಪ್ಪ ಪಂಚಾಕ್ಷರಿ, ಬಸವರಾಜ ಚಾರೆ, ಶಿವರಾಜ ಅಲ್ಮಾಜೆ, ಡಾ. ಶಂಕರರಾವ ದೇಶಮುಖ, ಸುನೀಲ ಕುಮಾರ ದೇಶಮುಖ, ದಯಾನಂದ ಘುಳೆ, ಶಿವಾನಂದ ಕನಕೆ ಪಾಲ್ಗೊಂಡಿದ್ದರು.</p>.<p>‘ಸ್ಥಳೀಯ ಗಣ್ಯರು ಹಾಗೂ ಭಕ್ತರ ಸಹಕಾರದಿಂದ ಅಮರೇಶ್ವರ ರಥೋತ್ಸವ ಶಾಂತಿಯುತವಾಗಿ ಜರುಗಿದೆ ಎಂದು ತಹಶೀಲ್ದಾರ್ ಎಂ.ಚಂದ್ರಶೇಖರ್ ತಿಳಿಸಿದರು.</p>.<p>ಪಟ್ಟಣದ ಎಲ್ಲಡೆ ಬಂದೋಬಸ್ತ್ ಮಾಡಲಾಗಿತ್ತು. 100 ಜನ ಪೊಲೀಸರು, ಎರಡು ಡಿಎಆರ್ ತಂಡ, ಸ್ವಯಂ ಸೇವಕರ ಪಡೆ ಇಡೀ ರಾತ್ರಿ ರಥೋತ್ಸವ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: </strong>ಭಕ್ತರ ಹರ್ಷೋದ್ಘಾರ ಹಾಗೂ ಜಯಘೋಷಗಳ ನಡುವೆ ಶನಿವಾರ ಬೆಳಗಿನ ಜಾವ ಇಲ್ಲಿಯ ಅಮರೇಶ್ವರ ರಥೋತ್ಸವ ಜರುಗಿತು.</p>.<p>ವೈವಿದ್ಯಮಯ ಹೂ ಮತ್ತು ದೀಪಗಳಿಂದ ಅಲಂಕರಿಸಲಾದ ರಥ ಅಮರೇಶ್ವರ ದೇವಸ್ಥಾನ ಆವರಣದಿಂದ ಹೊರಡುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ‘ಓಂ ಭಲಾ, ಶಂಕರ ಭಲಾ’ ಎಂಬ ಜಯಘೋಷ ಎಲ್ಲೆಡೆ ಮೊಳಗಿತ್ತು. ಭಕ್ತರು ಈ ಸುಂದರ ದೃಶ್ಯ ಕಣ್ಮುಂಬಿಕೊಂಡು ಭಕ್ತಿಭಾವ ಮೆರೆದರು.</p>.<p>ರಸ್ತೆಯ ಎರಡೂ ಬದಿಯಲ್ಲಿ ನಿಂತ ಭಕ್ತರು ರಥೋತ್ಸವವನ್ನು ಸ್ವಾಗತಿಸಿದರು. ಕೈಜೋಡಿಸಿ ಅಮರೇಶ್ವರನಿಗೆ ನಮಿಸಿದರು. ಕೆಲವರು ಶಲ್ಯ ತೊಡಿಸಿ, ಕಾಯಿ ಒಡೆದು ತಮ್ಮ ಇಷ್ಟಾರ್ಥ ಪೂರೈಸಿದರು.</p>.<p>ರಥ ಹೋಗುವ ದಾರಿಯುದ್ದಕ್ಕೂ ರಂಗೋಲಿ ಹಾಕಿ ವಿವಿಧ ಬಣ್ಣದ ಹೂ ಹಾಸಲಾಗಿತ್ತು. ಸ್ಥಳೀಯ ಕಲಾವಿದರ ನೃತ್ಯ, ಯುವಕರ ಕೋಲಾಟ, ಡೊಳ್ಳು ಕುಣಿತ ಮೆರವಣಿಗೆ ಕಳೆ ಕಟ್ಟಿತ್ತು. ಜಾತ್ರೆಗೆ ಆಗಮಿಸಿದ ಭಕ್ತರು ಹುಗ್ಗಿ ಪ್ರಸಾದ ಸವಿದು ಸಂಭ್ರಮಿಸಿದರು.</p>.<p>ಅಮರೇಶ್ವರ ದೇವಸ್ಥಾನದಲ್ಲಿ ತಾಲ್ಲೂಕಿನ ವಿವಿಧೆಡೆಯಿಂದ ಆಗಮಿಸಿದ ಕಲಾವಿದರು ಭಜನೆ ಕೀರ್ತನೆ ನಡೆಸಿಕೊಟ್ಟರು.</p>.<p>ರಾತ್ರಿ ಸಂಸದ ಭಗವಂತ ಖೂಬಾ ರಥೋತ್ಸವಕ್ಕೆ ಪೂಜೆ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಬೆಳಿಗ್ಗೆ ಆಗಮಿಸಿ ಅಮರೇಶ್ವರನಿಗೆ ನಮಿಸಿದರು. ಧುರೀಣ ಬಸವರಾಜ ದೇಶಮುಖ, ಶರಣಪ್ಪ ಪಂಚಾಕ್ಷರಿ, ಬಸವರಾಜ ಚಾರೆ, ಶಿವರಾಜ ಅಲ್ಮಾಜೆ, ಡಾ. ಶಂಕರರಾವ ದೇಶಮುಖ, ಸುನೀಲ ಕುಮಾರ ದೇಶಮುಖ, ದಯಾನಂದ ಘುಳೆ, ಶಿವಾನಂದ ಕನಕೆ ಪಾಲ್ಗೊಂಡಿದ್ದರು.</p>.<p>‘ಸ್ಥಳೀಯ ಗಣ್ಯರು ಹಾಗೂ ಭಕ್ತರ ಸಹಕಾರದಿಂದ ಅಮರೇಶ್ವರ ರಥೋತ್ಸವ ಶಾಂತಿಯುತವಾಗಿ ಜರುಗಿದೆ ಎಂದು ತಹಶೀಲ್ದಾರ್ ಎಂ.ಚಂದ್ರಶೇಖರ್ ತಿಳಿಸಿದರು.</p>.<p>ಪಟ್ಟಣದ ಎಲ್ಲಡೆ ಬಂದೋಬಸ್ತ್ ಮಾಡಲಾಗಿತ್ತು. 100 ಜನ ಪೊಲೀಸರು, ಎರಡು ಡಿಎಆರ್ ತಂಡ, ಸ್ವಯಂ ಸೇವಕರ ಪಡೆ ಇಡೀ ರಾತ್ರಿ ರಥೋತ್ಸವ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>