<p><strong>ಔರಾದ್</strong>: ತಾಲ್ಲೂಕಿನ ಸಂತಪುರ ಸಿದ್ಧರಾಮೇಶ್ವರ ಕಾಲೇಜಿನಲ್ಲಿ ಈಚೆಗೆ ನಡೆದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಬೋರ್ಗಿ ಸರ್ಕಾರಿ ಶಾಲೆಯ ಸಂಪನ್ಮೂಲ ಶಿಕ್ಷಕ ಮುತ್ತಣ್ಣ ಅವರು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಕುರಿತ ಪುಸ್ತಕಗಳನ್ನು ವಿತರಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ನಿರ್ದೇಶಕ ಡಾ. ಎಚ್.ಟಿ.ಪೋತೆ ಅವರು ರಚಿಸಿರುವ ಮತ್ತು ಬೆಂಗಳೂರಿನ ಸಪ್ನ ಬುಕ್ ಹೌಸ್ ಹೊರತಂದಿರುವ ಡಾ. ಬಿ.ಆರ್.ಅಂಬೇಡ್ಕರ್ ಪುಸ್ತಕದ 220 ಪ್ರತಿಗಳನ್ನು ಖರೀದಿಸಿ, ವಿದ್ಯಾರ್ಥಿಗಳಿಗೆ ವಿತರಿಸಿರುವೆ’ ಎಂದರು.</p>.<p>‘ಅಂಬೇಡ್ಕರ್ ಅವರ ಕುರಿತು ವಿದ್ಯಾರ್ಥಿಗಳು ಅರಿಯಲಿ. ಅವರು ಎದುರಿಸಿದ ಸಂಕಷ್ಟ ಮತ್ತು ಸವಾಲುಗಳು ಗೊತ್ತಾಗಲಿ. ಸಂವಿಧಾನ ರಚನೆಯ ಮಹತ್ವ ತಿಳಿಯಲಿಎಂಬ ಆಶಯ ನನ್ನದು’ ಎಂದು ಹೇಳಿದರು.</p>.<p>ಕೆಎಎಸ್ ಅಧಿಕಾರಿ ಖಾಜಾ ಖಲೀಲುಲ್ಲ ಮತ್ತು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಮಾತನಾಡಿದರು. ಸಮಾಜದ ಬಗ್ಗೆ ಕಳಕಳಿ ಹೊಂದಿರುವ ಮುತ್ತಣ್ಣ ಅವರು ತಮ್ಮ ಊರಿನ ಜನರಲ್ಲಿ ಜಾಗೃತಿ ಮೂಡಿಸಿ, 100ಕ್ಕೂ ಹೆಚ್ಚು ಶೌಚಾಲಯಗಳನ್ನು ಕಟ್ಟಿಸುವಲ್ಲಿ ಸಹಕರಿಸಿದ್ದಾರೆ ಎಂದು ಶ್ಲಾಘಿಸಿದರು.</p>.<p>ಶಿಕ್ಷಕ ಮಹೇಂದ್ರಸಿಂಗ್ ಪಾಟೀಲ, ಉಪನ್ಯಾಸಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ತಾಲ್ಲೂಕಿನ ಸಂತಪುರ ಸಿದ್ಧರಾಮೇಶ್ವರ ಕಾಲೇಜಿನಲ್ಲಿ ಈಚೆಗೆ ನಡೆದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಬೋರ್ಗಿ ಸರ್ಕಾರಿ ಶಾಲೆಯ ಸಂಪನ್ಮೂಲ ಶಿಕ್ಷಕ ಮುತ್ತಣ್ಣ ಅವರು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಕುರಿತ ಪುಸ್ತಕಗಳನ್ನು ವಿತರಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ನಿರ್ದೇಶಕ ಡಾ. ಎಚ್.ಟಿ.ಪೋತೆ ಅವರು ರಚಿಸಿರುವ ಮತ್ತು ಬೆಂಗಳೂರಿನ ಸಪ್ನ ಬುಕ್ ಹೌಸ್ ಹೊರತಂದಿರುವ ಡಾ. ಬಿ.ಆರ್.ಅಂಬೇಡ್ಕರ್ ಪುಸ್ತಕದ 220 ಪ್ರತಿಗಳನ್ನು ಖರೀದಿಸಿ, ವಿದ್ಯಾರ್ಥಿಗಳಿಗೆ ವಿತರಿಸಿರುವೆ’ ಎಂದರು.</p>.<p>‘ಅಂಬೇಡ್ಕರ್ ಅವರ ಕುರಿತು ವಿದ್ಯಾರ್ಥಿಗಳು ಅರಿಯಲಿ. ಅವರು ಎದುರಿಸಿದ ಸಂಕಷ್ಟ ಮತ್ತು ಸವಾಲುಗಳು ಗೊತ್ತಾಗಲಿ. ಸಂವಿಧಾನ ರಚನೆಯ ಮಹತ್ವ ತಿಳಿಯಲಿಎಂಬ ಆಶಯ ನನ್ನದು’ ಎಂದು ಹೇಳಿದರು.</p>.<p>ಕೆಎಎಸ್ ಅಧಿಕಾರಿ ಖಾಜಾ ಖಲೀಲುಲ್ಲ ಮತ್ತು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಮಾತನಾಡಿದರು. ಸಮಾಜದ ಬಗ್ಗೆ ಕಳಕಳಿ ಹೊಂದಿರುವ ಮುತ್ತಣ್ಣ ಅವರು ತಮ್ಮ ಊರಿನ ಜನರಲ್ಲಿ ಜಾಗೃತಿ ಮೂಡಿಸಿ, 100ಕ್ಕೂ ಹೆಚ್ಚು ಶೌಚಾಲಯಗಳನ್ನು ಕಟ್ಟಿಸುವಲ್ಲಿ ಸಹಕರಿಸಿದ್ದಾರೆ ಎಂದು ಶ್ಲಾಘಿಸಿದರು.</p>.<p>ಶಿಕ್ಷಕ ಮಹೇಂದ್ರಸಿಂಗ್ ಪಾಟೀಲ, ಉಪನ್ಯಾಸಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>