<p><strong>ಬೀದರ್:</strong> ‘ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಗರದಲ್ಲಿ ಮಾರ್ಚ್ 14, 15ರಂದು ಆಯೋಜಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಸರ್ಕಾರ ₹70 ಲಕ್ಷ ಅನುದಾನ ನೀಡಿದೆ. ಆದರೆ, ಸಮ್ಮೇಳನಕ್ಕೆ ಕೆಲವೇ ದಿನಗಳು ಉಳಿದರೂ ಇದುವರೆಗೆ ಅದರ ಮಾಹಿತಿಯೇ ಹಂಚಿಕೊಂಡಿಲ್ಲ. ಅನುದಾನ ದುರ್ಬಳಕೆಗೆ ಹುನ್ನಾರ ನಡೆದಿದೆ. ಆದಕಾರಣ ಸಮ್ಮೇಳನವನ್ನು ಮುಂದೂಡಬೇಕು’ ಎಂದು ಬಸವಕಲ್ಯಾಣ ತಾಲೂಕಿನ ಹತ್ಯಾಳದ ಕರ್ನಾಟಕ ಶರಣ್ ಬಹುದೇಶಿಯ ಸೇವಾಭಾವಿ ಸಂಸ್ಥೆಯ ಅಧ್ಯಕ್ಷ ಮತ್ತು ಅಂತರರಾಷ್ಟ್ರೀಯ ಬೌದ್ಧ ಭಿಕ್ಕು ಸಂಘದ ಉಪಾಧ್ಯಕ್ಷ ಭಂತೆ ಧಮ್ಮನಾಗ ಆಗ್ರಹಿಸಿದರು.</p>.<p>‘ಡಾ. ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಸಮಕಾಲೀನ ಪರಿಹಾರಗಳು’ ವಿಷಯದ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ ಆಯೋಜನೆಗೆ 2023ರಿಂದ ನಿರಂತರವಾಗಿ ನಾನು ಪ್ರಯತ್ನಿಸುತ್ತ ಬಂದಿದ್ದೇನೆ. ಸರ್ಕಾರವು ಅಂಬೇಡ್ಕರ್ ಸಂಶೋಧನಾ ಕೇಂದ್ರದ ವತಿಯಿಂದ ₹70 ಲಕ್ಷ ಅನುದಾನ 2025ರ ಸೆಪ್ಟೆಂಬರ್ನಲ್ಲಿ ಬಿಡುಗಡೆಗೊಳಿಸಿದೆ. ಆದರೆ, ನನಗೆ ಹಾಗೂ ಅಂಬೇಡ್ಕರವಾದಿ ಸಂಘ-ಸಂಸ್ಥೆಗಳಿಗೆ ಮಾಹಿತಿ ನೀಡಿಲ್ಲ. ಯಾವುದೇ ಪೂರ್ವಭಾವಿ ಸಭೆ ಕರೆದಿಲ್ಲ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಸಮ್ಮೇಳನದ ಯಶಸ್ವಿಗಾಗಿ ಇ-ಟೆಂಡರ್ ಕರೆದಿಲ್ಲ. ಉಪಸಮಿತಿಗಳನ್ನು ರಚಿಸಿಲ್ಲ. ಸಮ್ಮೇಳನಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಅನುದಾನ ದುರ್ಬಳಕೆ ಮಾಡಿಕೊಳ್ಳಲು ಹುನ್ನಾರ ನಡೆಸಿದ್ದಾರೆ. ಸಮ್ಮೇಳನವನ್ನು ಎರಡು ತಿಂಗಳು ಮುಂದೂಡಬೇಕು ಎಂದು ಆಗ್ರಹಿಸಿದರು.</p>.<p>ಈ ಸಮ್ಮೇಳನಕ್ಕೆ ಜಪಾನ್, ಜರ್ಮನಿ, ದಕ್ಷಿಣ ಆಫ್ರಿಕಾ, ಬ್ರಿಟನ್ ಹಾಗೂ ರಷ್ಯಾ ದೇಶದ ಅತಿಥಿಗಳನ್ನು ಆಹ್ವಾನಿಸಿದ್ದೆ. ಸಮ್ಮೇಳನದ ಆಯೋಜನೆಗೆ ಹಗಲಿರುಳು ಶ್ರಮಿಸಿದ್ದೇನೆ. ಆದರೆ, ಇದುವರೆಗೆ ಆಮಂತ್ರಣ ಪತ್ರಿಕೆ, ಕಟೌಟ್, ಬ್ಯಾನರ್ಗಳು ಹಾಗೂ ಪ್ರಚಾರ ಕಾರ್ಯ ಕೈಗೊಂಡಿಲ್ಲ. ಅಂಬೇಡ್ಕರ್ ಅವರ ಚಿಂತನೆಗಳನ್ನು ಗಾಳಿಗೆ ತೂರಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಮಾಡಲಾಗುವುದು. ಅದಕ್ಕೂ ಬಗ್ಗದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವೆ. ಸಮಾಜದ ಮುಖಂಡರು ಕುರುಡ, ಕಿವುಡರಾಗಿ ಕುಳಿತುಕೊಳ್ಳದೆ ಹೋರಾಟ ಮಾಡಬೇಕು ಎಂದು ಹೇಳಿದರು.</p>.<p>ಭಂತೆ ಸಂಘಜ್ಯೋತಿ, ಬೌದ್ಧ ಭಿಕ್ಕುಗಳು ಉಪಸ್ಥಿತರಿದ್ದರು.</p>.<p><strong>14 15ರಂದು ವಿಚಾರ ಸಂಕಿರಣ </strong></p><p><strong>ಬೀದರ್:</strong> ‘ಭಾರತದ ಪ್ರಸ್ತುತ ಸವಾಲುಗಳು ಡಾ. ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಸಮಕಾಲೀನ ಪರಿಹಾರಗಳು’ ಎಂಬ ವಿಷಯದ ಕುರಿತು ಮಾ.14ರಂದು ನಗರದ ಬೆಲ್ದಾಳೆ ಕನ್ವೆನ್ಷನ್ ಹಾಲ್ನಲ್ಲಿ ಹಾಗೂ ಮಾ.15 ರಂದು ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ’ ಎಂದು ಬೀದರ್ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮಂಗಳವಾರ ಸಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಗರದಲ್ಲಿ ಮಾರ್ಚ್ 14, 15ರಂದು ಆಯೋಜಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಸರ್ಕಾರ ₹70 ಲಕ್ಷ ಅನುದಾನ ನೀಡಿದೆ. ಆದರೆ, ಸಮ್ಮೇಳನಕ್ಕೆ ಕೆಲವೇ ದಿನಗಳು ಉಳಿದರೂ ಇದುವರೆಗೆ ಅದರ ಮಾಹಿತಿಯೇ ಹಂಚಿಕೊಂಡಿಲ್ಲ. ಅನುದಾನ ದುರ್ಬಳಕೆಗೆ ಹುನ್ನಾರ ನಡೆದಿದೆ. ಆದಕಾರಣ ಸಮ್ಮೇಳನವನ್ನು ಮುಂದೂಡಬೇಕು’ ಎಂದು ಬಸವಕಲ್ಯಾಣ ತಾಲೂಕಿನ ಹತ್ಯಾಳದ ಕರ್ನಾಟಕ ಶರಣ್ ಬಹುದೇಶಿಯ ಸೇವಾಭಾವಿ ಸಂಸ್ಥೆಯ ಅಧ್ಯಕ್ಷ ಮತ್ತು ಅಂತರರಾಷ್ಟ್ರೀಯ ಬೌದ್ಧ ಭಿಕ್ಕು ಸಂಘದ ಉಪಾಧ್ಯಕ್ಷ ಭಂತೆ ಧಮ್ಮನಾಗ ಆಗ್ರಹಿಸಿದರು.</p>.<p>‘ಡಾ. ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಸಮಕಾಲೀನ ಪರಿಹಾರಗಳು’ ವಿಷಯದ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ ಆಯೋಜನೆಗೆ 2023ರಿಂದ ನಿರಂತರವಾಗಿ ನಾನು ಪ್ರಯತ್ನಿಸುತ್ತ ಬಂದಿದ್ದೇನೆ. ಸರ್ಕಾರವು ಅಂಬೇಡ್ಕರ್ ಸಂಶೋಧನಾ ಕೇಂದ್ರದ ವತಿಯಿಂದ ₹70 ಲಕ್ಷ ಅನುದಾನ 2025ರ ಸೆಪ್ಟೆಂಬರ್ನಲ್ಲಿ ಬಿಡುಗಡೆಗೊಳಿಸಿದೆ. ಆದರೆ, ನನಗೆ ಹಾಗೂ ಅಂಬೇಡ್ಕರವಾದಿ ಸಂಘ-ಸಂಸ್ಥೆಗಳಿಗೆ ಮಾಹಿತಿ ನೀಡಿಲ್ಲ. ಯಾವುದೇ ಪೂರ್ವಭಾವಿ ಸಭೆ ಕರೆದಿಲ್ಲ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಸಮ್ಮೇಳನದ ಯಶಸ್ವಿಗಾಗಿ ಇ-ಟೆಂಡರ್ ಕರೆದಿಲ್ಲ. ಉಪಸಮಿತಿಗಳನ್ನು ರಚಿಸಿಲ್ಲ. ಸಮ್ಮೇಳನಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಅನುದಾನ ದುರ್ಬಳಕೆ ಮಾಡಿಕೊಳ್ಳಲು ಹುನ್ನಾರ ನಡೆಸಿದ್ದಾರೆ. ಸಮ್ಮೇಳನವನ್ನು ಎರಡು ತಿಂಗಳು ಮುಂದೂಡಬೇಕು ಎಂದು ಆಗ್ರಹಿಸಿದರು.</p>.<p>ಈ ಸಮ್ಮೇಳನಕ್ಕೆ ಜಪಾನ್, ಜರ್ಮನಿ, ದಕ್ಷಿಣ ಆಫ್ರಿಕಾ, ಬ್ರಿಟನ್ ಹಾಗೂ ರಷ್ಯಾ ದೇಶದ ಅತಿಥಿಗಳನ್ನು ಆಹ್ವಾನಿಸಿದ್ದೆ. ಸಮ್ಮೇಳನದ ಆಯೋಜನೆಗೆ ಹಗಲಿರುಳು ಶ್ರಮಿಸಿದ್ದೇನೆ. ಆದರೆ, ಇದುವರೆಗೆ ಆಮಂತ್ರಣ ಪತ್ರಿಕೆ, ಕಟೌಟ್, ಬ್ಯಾನರ್ಗಳು ಹಾಗೂ ಪ್ರಚಾರ ಕಾರ್ಯ ಕೈಗೊಂಡಿಲ್ಲ. ಅಂಬೇಡ್ಕರ್ ಅವರ ಚಿಂತನೆಗಳನ್ನು ಗಾಳಿಗೆ ತೂರಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಮಾಡಲಾಗುವುದು. ಅದಕ್ಕೂ ಬಗ್ಗದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವೆ. ಸಮಾಜದ ಮುಖಂಡರು ಕುರುಡ, ಕಿವುಡರಾಗಿ ಕುಳಿತುಕೊಳ್ಳದೆ ಹೋರಾಟ ಮಾಡಬೇಕು ಎಂದು ಹೇಳಿದರು.</p>.<p>ಭಂತೆ ಸಂಘಜ್ಯೋತಿ, ಬೌದ್ಧ ಭಿಕ್ಕುಗಳು ಉಪಸ್ಥಿತರಿದ್ದರು.</p>.<p><strong>14 15ರಂದು ವಿಚಾರ ಸಂಕಿರಣ </strong></p><p><strong>ಬೀದರ್:</strong> ‘ಭಾರತದ ಪ್ರಸ್ತುತ ಸವಾಲುಗಳು ಡಾ. ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಸಮಕಾಲೀನ ಪರಿಹಾರಗಳು’ ಎಂಬ ವಿಷಯದ ಕುರಿತು ಮಾ.14ರಂದು ನಗರದ ಬೆಲ್ದಾಳೆ ಕನ್ವೆನ್ಷನ್ ಹಾಲ್ನಲ್ಲಿ ಹಾಗೂ ಮಾ.15 ರಂದು ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ’ ಎಂದು ಬೀದರ್ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮಂಗಳವಾರ ಸಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>