ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ

ಗುತ್ತಿ (ಹುಲಸೂರ): ತಾಲ್ಲೂಕಿನ ಗುತ್ತಿ ಗ್ರಾಮದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಆಚರಿಸಲಾಯಿತು.
ಆಲ್ ಇಂಡಿಯಾ ಪ್ಯಾಂಥರ್ ಸೇನಾದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಫುಲ್ಲ ಸೂರ್ಯವಂಶಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ ಬಿರಾದಾರ, ಬಾಜಿರಾವ್ ಬಿರಾದಾರ, ವೈಭವ ಬಿರಾದಾರ, ಪಿಂಟೂ ಗಾಯಕವಾಡ, ಜಯಭೀಮ ಸೋಮುವಂಶಿ ಸೇರಿದಂತೆ ಗ್ರಾಮದ ಪ್ರಮುಖರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.