<p><strong>ಬೀದರ್:</strong> ಹಾವೇರಿ ಜಿಲ್ಲೆಯ ನರಸಿಂಹಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ 900ನೇ ಜಯಂತ್ಯುತ್ಸವದ ಪ್ರಯುಕ್ತ ಜನವರಿ 14 ಹಾಗೂ 15 ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ತಿಳಿಸಿದರು.</p>.<p>ಜನವರಿ 14 ರಂದು ಸಂಜೆ 5.30ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಜ 15 ರಂದು ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ, ಸಾಮೂಹಿಕ ಸರಳ ವಿವಾಹ ಮಹೋತ್ಸವ, ವಚನಗ್ರಂಥ ಮೆರವಣಿಗೆ ನಡೆಯಲಿದೆ ಎಂದು ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p>‘ಶಾಂತಮುನಿ ಸ್ವಾಮೀಜಿಯ ನಾಲ್ಕನೆಯ ಸ್ಮರಣೋತ್ಸವ, ಶಾಂತಭೀಮ ಸ್ವಾಮೀಜಿಯ ತೃತೀಯ ಪೀಠಾರೋಹಣದ ವಾರ್ಷಿಕೋತ್ಸವ ಹಾಗೂ ಸರಳ ಸಾಮೂಹಿಕ ವಿವಾಹ ನಡೆಯಲಿದೆ’ ಎಂದು ತಿಳಿಸಿದರು.</p>.<p>‘ಸಮಾರಂಭದಲ್ಲಿ 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ನಾಡಿನ ಮಠಾಧೀಶರು, ಶರಣರು, ಸಂತರು ಸಾಹಿತಿಗಳು ಉಪನ್ಯಾಸ ನೀಡುವರು. ಬೀದರ್ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವರು’ ಎಂದರು.</p>.<p>ಜಗನ್ನಾಥ ಜಮಾದಾರ, ಬಸವರಾಜ ಸಪ್ಪನಗೋಳ, ಸುನೀಲ ಕಾಶೆಂಪೂರ್, ಪಾಂಡುರಂಗ ಗುರೂಜಿ, ಸುನೀಲ ಭಾವಿಕಟ್ಟಿ ಹಾಗೂ ಶಿವರಾಜ ಬಂಬುಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಹಾವೇರಿ ಜಿಲ್ಲೆಯ ನರಸಿಂಹಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ 900ನೇ ಜಯಂತ್ಯುತ್ಸವದ ಪ್ರಯುಕ್ತ ಜನವರಿ 14 ಹಾಗೂ 15 ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ತಿಳಿಸಿದರು.</p>.<p>ಜನವರಿ 14 ರಂದು ಸಂಜೆ 5.30ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಜ 15 ರಂದು ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ, ಸಾಮೂಹಿಕ ಸರಳ ವಿವಾಹ ಮಹೋತ್ಸವ, ವಚನಗ್ರಂಥ ಮೆರವಣಿಗೆ ನಡೆಯಲಿದೆ ಎಂದು ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p>‘ಶಾಂತಮುನಿ ಸ್ವಾಮೀಜಿಯ ನಾಲ್ಕನೆಯ ಸ್ಮರಣೋತ್ಸವ, ಶಾಂತಭೀಮ ಸ್ವಾಮೀಜಿಯ ತೃತೀಯ ಪೀಠಾರೋಹಣದ ವಾರ್ಷಿಕೋತ್ಸವ ಹಾಗೂ ಸರಳ ಸಾಮೂಹಿಕ ವಿವಾಹ ನಡೆಯಲಿದೆ’ ಎಂದು ತಿಳಿಸಿದರು.</p>.<p>‘ಸಮಾರಂಭದಲ್ಲಿ 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ನಾಡಿನ ಮಠಾಧೀಶರು, ಶರಣರು, ಸಂತರು ಸಾಹಿತಿಗಳು ಉಪನ್ಯಾಸ ನೀಡುವರು. ಬೀದರ್ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವರು’ ಎಂದರು.</p>.<p>ಜಗನ್ನಾಥ ಜಮಾದಾರ, ಬಸವರಾಜ ಸಪ್ಪನಗೋಳ, ಸುನೀಲ ಕಾಶೆಂಪೂರ್, ಪಾಂಡುರಂಗ ಗುರೂಜಿ, ಸುನೀಲ ಭಾವಿಕಟ್ಟಿ ಹಾಗೂ ಶಿವರಾಜ ಬಂಬುಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>