ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Last Updated 21 ಜನವರಿ 2022, 13:19 IST
ಅಕ್ಷರ ಗಾತ್ರ

ಬೀದರ್: ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಯಿತು.

ಪಕ್ಷದ ಕಲಬುರ್ಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಹಾಗೂ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಅವರು ಜಂಟಿಯಾಗಿ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಿದರು.

ಅಂಬಿಗರ ಚೌಡಯ್ಯ 12ನೇ ಶತಮಾನದ ಶರಣರಲ್ಲಿ ಒಬ್ಬರಾಗಿದ್ದರು ಎಂದು ಚೌಡಯ್ಯ ಅವರ ಕುರಿತು ಉಪನ್ಯಾಸ ನೀಡಿದ ಮುಖಂಡ ರವೀಂದ್ರ ಬಾಲೆಬಾಯಿ ಹೇಳಿದರು.

ಬಸವಣ್ಣನವರ ಆಪ್ತರಾಗಿದ್ದರು. ಕಾಯಕ ನಿಷ್ಠೆ, ನೇರ ನಡೆ-ನುಡಿಗೆ ಹೆಸರಾಗಿದ್ದರು ಎಂದು ತಿಳಿಸಿದರು.

ಬಿಜೆಪಿ ಎಸ್.ಟಿ. ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಪಾಲಂ, ಬೀದರ್ ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ಎಸ್.ಟಿ. ಮೋರ್ಚಾ ನಗರ ಘಟಕದ ಅಧ್ಯಕ್ಷ ರಮೇಶ ಬಿರಾದಾರ, ಉಪಾಧ್ಯಕ್ಷರಾದ ಸಂಜು ಜಮಾದಾರ್, ದೀಪಕ್ ಚಿದ್ರಿ, ಅವಿನಾಶ ಬರಿದಾಬಾದೆ, ಅವಿನಾಶ, ವಾಲ್ಮಿಕಿ ಉಪಸ್ಥಿತರಿದ್ದರು.

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಹಾಗೂ ನಗರದ ಕೆಪಿ ಪ್ರೌಢ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಬಾಬು ವಾಲಿ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT