ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಮನಾಬಾದ್: ಹಳ್ಳಿಖೇಡ ಬಿ, ಚಿಟಗುಪ್ಪಕ್ಕೆ ಆಂಬುಲೆನ್ಸ್

Last Updated 6 ಜೂನ್ 2021, 7:03 IST
ಅಕ್ಷರ ಗಾತ್ರ

ಹುಮನಾಬಾದ್: 2019-20ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆ ಅಡಿಯಲ್ಲಿ ಸುಮಾರು ₹45 ಲಕ್ಷ ಗಳಲ್ಲಿ ತಾಲ್ಲೂಕಿನ ಹಳ್ಳಿಖೇಡ ಬಿ. ಮತ್ತು ಚಿಟಗುಪ್ಪ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶಾಸಕ ರಾಜಶೇಖರ ಪಾಟೀಲ ಅವರು ತಲಾ ಒಂದು ಆಂಬುಲೆನ್ಸ್‌ ಹಸ್ತಾಂತರಿಸಿದರು.

‘ಸಾರ್ವಜನಿಕರು ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಎಚ್ಚರಿಕೆ ವಹಿಸಬೇಕು’ ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ ಮಾತನಾಡಿ, ‘ನೆಗಡಿ, ಕೆಮ್ಮು, ಜ್ವರ ಕಂಡುಬಂದರೆ ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕು’ ಎಂದು ಸಲಹೆ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಣರಾವ ಬುಳ್ಳಾ, ತಾ.ಪಂಮಾಜಿ ಅಧ್ಯಕ್ಷ ರಮೇಶ ಡಾಕುಳಗಿ, ಕಂಟೆಪ್ಪ ದಾನಾ, ಮಾಹಾಂತಯ್ಯ ತೀರ್ಥ, ಮಲ್ಲಿಕಾರ್ಜುನ ಮಾಶೆಟ್ಟಿ, ಕಸ್ತೂರ ಬಾಯಿ ಪರಸನೋರ್, ಅಭಿಷೇಕ ಪಾಟೀಲ, ಸೋಮಶೇಖರ ಪಾಟೀಲ, ರೇವಣಸಿದ್ದಪ್ಪ ಪಾಟೀಲ, ದತ್ತುಕುಮಾರ ಚಿದ್ರಿ, ಅಫ್ಸರ್ ಮಿಯ್ಯಾ, ರಾಜು ಇಟಗಿ, ಮಾಣಿಕ, ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT